ಮಥುರಾ (ಉತ್ತರ ಪ್ರದೇಶ): ಶ್ರೀಕೃಷ್ಣನ ಜನ್ಮಸ್ಥಳಕ್ಕೆ ಹೊಂದಿಕೊಂಡಿರುವ 17ನೇ ಶತಮಾನದ ಮಸೀದಿಯನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಥುರಾ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಲು ಒಂದು ವಾರಕ್ಕಿಂತ ಕಡಿಮೆ ಸಮಯವಿರುವಾಗಲೇ, ಅಖಿಲ ಭಾರತ ಪುರೋಹಿತರ ಸಂಘ ಮತ್ತು ಸಾಮಾಜಿಕ ಸಂಸ್ಥೆಯೊಂದು ಪ್ರಕರಣದ ಪಕ್ಷದಾರರಾಗಲು( ಪಾರ್ಟಿಯಾಗಲು) ಕೋರಿ ಅರ್ಜಿ ಸಲ್ಲಿಸಿವೆ.
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಗಳಲ್ಲಿ, ಅಖಿಲ ಭಾರತೀಯ ತೀರ್ಥ ಪುರೋಹಿತರ ಮಹಾಸಭಾ ಮತ್ತು ಮಾಥುರಾ ಚತುರ್ವೇದಿ ಪರಿಷತ್, ಕತ್ರಿ ಕೇಶವ್ ದೇವ್ ದೇವಸ್ಥಾನದೊಳಗೆ ನಿರ್ಮಿಸಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕುವಂತೆ ಕೋರಿರುವ ಅರ್ಜಿಯನ್ನು ಖಂಡಿಸಿ, ಇದು ಪಟ್ಟಣದಲ್ಲಿ ಕೋಮು ಗೊಂದಲ ಸೃಷ್ಟಿಸುವ ಸಾಧ್ಯತೆ ಇದೆ ಎಂದಿದೆ.