ಅಹಮದಾಬಾದ್(ಗುಜರಾತ್):ರಾಜ್ಯದಬೋಟಾಡ್ ಜಿಲ್ಲೆಯ ರೋಜಿದ್ ಗ್ರಾಮ ಮತ್ತು ಧಂಧೂಕಾ, ಭಾವನಗರದಲ್ಲಿ ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿರುವವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಅಸ್ವಸ್ಥಗೊಂಡ47 ಮಂದಿಯನ್ನು ಈಗಾಗಲೇ ಭಾವನಗರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಜರಾತ್ ಕಳ್ಳಭಟ್ಟಿ ದುರಂತ: ಸಾವಿಗೀಡಾದವರ ಸಂಖ್ಯೆ 28ಕ್ಕೇರಿಕೆ - ETV Bhart Kannada
ಗುಜರಾತ್ನಲ್ಲಿ ಕಳ್ಳಭಟ್ಟಿ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವವರ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ.
![ಗುಜರಾತ್ ಕಳ್ಳಭಟ್ಟಿ ದುರಂತ: ಸಾವಿಗೀಡಾದವರ ಸಂಖ್ಯೆ 28ಕ್ಕೇರಿಕೆ Admitting sick people to hospital after consuming Illicit liquor](https://etvbharatimages.akamaized.net/etvbharat/prod-images/768-512-15925569-thumbnail-3x2-ggdeath.jpg)
ಕಳ್ಳಭಟ್ಟಿ ಸೇವಿಸಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು
ಐಜಿ ಅಶೋಕ್ ಯಾದವ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ಕಳ್ಳಭಟ್ಟಿ ಬಗ್ಗೆ ಸಾಕಷ್ಟು ವಿವಾದಗಳು ಏರ್ಪಟ್ಟಿದ್ದು, ರಾಜಕೀಯ ವಲಯದಲ್ಲಿಯೂ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಜುಲೈ 25ರಂದು ಬೋಟಾಡ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥಗೊಂಡ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 19 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮಂಗಳೂರು: ಪಬ್ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ, ಬಜರಂಗದಳ ತಡೆ
Last Updated : Jul 26, 2022, 1:16 PM IST