ಸೂರಜ್ಪುರ (ಛತ್ತೀಸ್ಗಢ): ಬಾವಿಯ ಗುಂಡಿ ತೋಡುವಾಗ ಗುಡ್ಡದ ಭಾಗವೊಂದು ಕುಸಿದು ಮಣ್ಣಿನಡಿ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಇಲ್ಲಿನ ಧಡೇಸೇರಿ ಗ್ರಾಮದಲ್ಲಿ ನಡೆದಿದೆ. 6 ಮಂದಿ ಮಣ್ಣಿನಡಿ ಸಿಲುಕಿದ್ದು ಅದರಲ್ಲಿ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಒಡ್ಗಿ ಪೊಲೀಸ್ ಠಾಣೆ ವ್ಯಾಪ್ತಿಯ ಧಡೇಸೇರಿ ಗ್ರಾಮದಲ್ಲಿ ಶನಿವಾರ ಸಂಜೆ ಆರು ಜನರು ಬಾವಿ ಅಗೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಿದರು.
ದಿನದ ಕೆಲಸವನ್ನು ಮುಗಿಸಲು ಹೊರಟಿದ್ದಾಗ, ಒಂದು ದಿಬ್ಬದ ಮಣ್ಣು ಕುಸಿದು ಬಿದ್ದಿದೆ. ಹೀಗಾಗಿ ಎಲ್ಲಾ ಆರು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ತಕ್ಷಣವೇ ಸ್ಥಳೀಯ ಜನರು ಅವಶೇಷಗಳಿಂದ ಮೂರು ಜನರನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.