ಕರ್ನಾಟಕ

karnataka

ಪಶ್ಚಿಮ ಬಂಗಾಳದಲ್ಲಿ ವಿವಿಧ ಪಕ್ಷಗಳ ಮೂವರು ಕಾರ್ಯಕರ್ತರ ಕೊಲೆ

By

Published : May 3, 2021, 2:55 PM IST

ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಡೆದ ಚುನಾವಣಾ ಫಲಿತಾಂಶದ ನಂತರ ಉಂಟಾದ ಹಿಂಸಾಚಾರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.

murder
murder

ಕೋಲ್ಕತ್ತಾ:ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಡೆದ ಚುನಾವಣಾ ಫಲಿತಾಂಶದ ನಂತರ ನಡೆದ ಹಿಂಸಾಚಾರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.

ದಕ್ಷಿಣ 24 ಪರಗಣದ ಸೋನಾರ್​ಪುರದಲ್ಲಿ ಬಿಜೆಪಿ ಕಾರ್ಯಕರ್ತ ಹರಣ್ ಅಧಿಕಾರಿ ಎಂಬುವವರನ್ನು ಕೊಲೆ ಮಾಡಲಾಗಿದೆ. ಅದೇ ರೀತಿ, ಕೋಲ್ಕತ್ತಾದ ಬೇಲೆಘಾಟಾದ ಬಳಿ ನಡೆದ ಮತ್ತೊಂದು ಹಿಂಸಾಚಾರ ಪ್ರಕರಣದಲ್ಲಿ ಅವಿಜಿತ್ ಸರ್ಕಾರ್‌ ಎಂಬ ಬಿಜೆಪಿಯ ಯುವ ಕಾರ್ಯಕರ್ತನೊಬ್ಬನನ್ನು ಹತ್ಯೆಗೈಯ್ಯಲಾಗಿದೆ.

ಉತ್ತರ 24 ಪರಗಣಗಳ ದತ್ತಾಪುಕೂರ್‌ನಲ್ಲಿ ಸಂಭವಿಸಿದ ಬಾಂಬ್​ ಸ್ಫೋಟದಲ್ಲಿ ಐಎಸ್‌ಎಫ್ ಕಾರ್ಯಕರ್ತ ಹಸನೂರ್ ರಹಮಾನ್ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮೃತರ ಕುಟುಂಬಸ್ಥರು ಟಿಎಂಸಿಯನ್ನು ದೂಷಿಸಿದ್ದಾರೆ.

ABOUT THE AUTHOR

...view details