ಕರ್ನಾಟಕ

karnataka

ETV Bharat / bharat

ರಾಜ್ಯಸಭೆ ಅಂಗೀಕಾರಕ್ಕಾಗಿ ಆರು ಮಸೂದೆಗಳ ಪಟ್ಟಿ ಮಾಡಿದ ಸರ್ಕಾರ.. ಮಣಿಪುರ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು!

Rajya Sabha: ಮಣಿಪುರ ಜನಾಂಗೀಯ ಹಿಂಸಾಚಾರದ ಕುರಿತು ನಿಯಮ 267ರ ಅಡಿ ವಿಸ್ತೃತ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸೃಷ್ಟಿಸಿದ ಗದ್ದಲದಿಂದಾಗಿ ಈ ಆರು ಮಸೂದೆಗಳಲ್ಲಿ ಕೆಲವನ್ನು ಮಂಗಳವಾರದ ಕಲಾಪದಲ್ಲಿ ಸೇರಿಸಲಾಗಿದೆ.

By

Published : Aug 1, 2023, 11:19 AM IST

Representative image
ಪ್ರಾತಿನಿಧಿಕ ಚಿತ್ರ

ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ. ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು - ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ (ತಿದ್ದುಪಡಿ) ಮಸೂದೆ 2023 ಮತ್ತು ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ 2023 ಅನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

ವಕೀಲರ (ತಿದ್ದುಪಡಿ) ಮಸೂದೆ:ಮಣಿಪುರ ಜನಾಂಗೀಯ ಹಿಂಸಾಚಾರದ ಕುರಿತು ನಿಯಮ 267ರ ಅಡಿಯಲ್ಲಿ ವಿಸ್ತೃತ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸೃಷ್ಟಿಸಿದ ಗದ್ದಲದಿಂದಾಗಿ ಈ ಆರು ಮಸೂದೆಗಳಲ್ಲಿ ಕೆಲವನ್ನು ಮಂಗಳವಾರದ ಕಲಾಪದಲ್ಲಿ ಸೇರಿಸಲಾಗಿದೆ. ಮಣಿಪುರ ಹಿಂಸಾಚಾರದ ವಿಷಯವಾಗಿ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಷಣದ ಬೇಡಿಕೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ರಾಜ್ಯಸಭೆಯಲ್ಲಿ ವಕೀಲರ ಕಾಯಿದೆ-1961 ಅನ್ನು ತಿದ್ದುಪಡಿ ಮಾಡಲು ವಕೀಲರ (ತಿದ್ದುಪಡಿ) ಮಸೂದೆ-2023 ಅನ್ನು ಮಂಡಿಸಲಿದ್ದಾರೆ.

ಇದನ್ನೂ ಓದಿ:ಮಣಿಪುರ ಹಿಂಸಾಚಾರ ಖಂಡಿಸಿ ಸಂಸತ್​ನಲ್ಲಿ ಗದ್ದಲ.. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಒಕ್ಕೂಟ ನಿರ್ಧಾರ

ಇತರೆ ಮಸೂದೆಗಳು: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇಂದು ರಾಜ್ಯಸಭೆಯಲ್ಲಿ ಮುದ್ರಣಾಲಯಗಳು ಮತ್ತು ನಿಯತಕಾಲಿಕೆಗಳ ನೋಂದಣಿಗಾಗಿ ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ-2023 ಅನ್ನು ಮಂಡಿಸಲಿದ್ದಾರೆ. ಮೇಘವಾಲ್ ಅವರು ಮಂಗಳವಾರ ರಾಜ್ಯಸಭೆಯಲ್ಲಿ ಮಧ್ಯಸ್ಥಿಕೆ ಮಸೂದೆ-2021 ಅನ್ನು ಪರಿಚಯಿಸುವ ಸಾಧ್ಯತೆಯಿದೆ.

ಬಹು-ರಾಜ್ಯ ಸಹಕಾರ ಸಂಘಗಳ ಕಾಯ್ದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಸಭೆಯಲ್ಲಿ ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ-2023 ಅನ್ನು ಅಂಗೀಕಾರಕ್ಕಾಗಿ ಮಂಡಿಸಲಿದ್ದಾರೆ. ಬಹು-ರಾಜ್ಯ ಸಹಕಾರ ಸಂಘಗಳ ಕಾಯಿದೆ- 2002 ಈ ಮಸೂದೆಯನ್ನು ಲೋಕಸಭೆಯು ಈ ಹಿಂದೆ ಅಂಗೀಕರಿಸಿತ್ತು.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಜೈವಿಕ ವೈವಿಧ್ಯ (ತಿದ್ದುಪಡಿ) ಮಸೂದೆ-2023 ಅನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಲಿದ್ದಾರೆ ಜೈವಿಕ ವೈವಿಧ್ಯ ಕಾಯಿದೆ- 2002 ಅನ್ನು ತಿದ್ದುಪಡಿ ಮಾಡಲು ಅದರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಈ ಮಸೂದೆಯನ್ನು ಲೋಕಸಭೆಯು ಈ ಹಿಂದೆ ಅಂಗೀಕರಿಸಿತ್ತು. ಅರಣ್ಯ (ಸಂರಕ್ಷಣೆ) ಕಾಯಿದೆ-1980 ಅನ್ನು ತಿದ್ದುಪಡಿ ಮಾಡಲು ಅದರ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಯಾದವ್ ಅವರು ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ-2023 ಅನ್ನು ಮೇಲ್ಮನೆಯಲ್ಲಿ ಮಂಡಿಸಲಿದ್ದಾರೆ.

ಕಲಾಪ ಆರಂಭಕ್ಕೂ ಮುನ್ನ, ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್​​ ನೇತೃತ್ವದಲ್ಲಿ ಸಮಾನ ಮನಸ್ಕ ಪಕ್ಷಗಳ ಮುಖಂಡರ ಸಭೆ ನಡೆಸಲಾಯಿತು.

ಇದನ್ನೂ ಓದಿ:Parliament Monsoon Session: ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರ ವಿಚಾರವಾಗಿ ಪ್ರತಿಪಕ್ಷಗಳ ಗದ್ದಲ

ABOUT THE AUTHOR

...view details