ಕರ್ನಾಟಕ

karnataka

ETV Bharat / bharat

ಪಂಜಾಬ್‌ನ ಒಕಾರಾದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 7 ಮಂದಿ ದುರ್ಮರಣ

ಪೂರ್ವ ಪಂಜಾಬ್ ಪ್ರಾಂತ್ಯದ ಒಕಾರಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

By

Published : Apr 24, 2023, 11:39 AM IST

Representative image
ಪ್ರಾತಿನಿಧಿಕ ಚಿತ್ರ

ಪಂಜಾಬ್:ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದ ಒಕಾರಾ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭೀಕರ ದುರಂತ ಸಂಭವಿಸಿದೆ. ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಜಿಲ್ಲೆಯ ಅಖ್ತರಾಬಾದ್ ಪ್ರದೇಶದ ಬಳಿಯ ಜಿಟಿ ರಸ್ತೆಯಲ್ಲಿ ಈ ದುರ್ಘಟನೆ ಜರುಗಿದೆ.

ಪ್ರಾಥಮಿಕ ಮೂಲಗಳ ಪ್ರಕಾರ "ಅತಿವೇಗದಿಂದ ಬಂದ ಬಸ್​ ರಿಕ್ಷಾಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಕಾಗಿದೆ. ದುರಂತವು ಏಳು ಜನರ ಪ್ರಾಣವನ್ನು ಬಲಿತೆಗೆದುಕೊಂಡಿದೆ. ಗಾಯಗೊಂಡವರಲ್ಲಿ ಒಬ್ಬರು ರಿಕ್ಷಾದಲ್ಲಿದ್ದರೆ, ಇನ್ನೊಬ್ಬರು ಬಸ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಶವಗಳನ್ನು ಸಮೀಪದ ಆಸ್ಪತ್ತೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿನ್ನೆ(ಏ.23) ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ದುರಂತ ಸಂಭವಿಸಿತ್ತು. ಖಾಸಗಿ ಬಸ್​ ಮತ್ತು ಟ್ರಕ್​ ಮಧ್ಯೆ ಡಿಕ್ಕಿಯಾಗಿ 4 ಮಂದಿ ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದರು. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದರು. ಕಾಟ್ರಾಜ್ ಘಾಟ್ ಬಳಿಯ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಭಾನುವಾರ ನಸುಕಿನಜಾವ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿತ್ತು. ಅಪಘಾತದ ಮಾಹಿತಿ ಪಡೆದ ಕಾಟ್ರಾಜ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು.

ಖಾಸಗಿ ಪ್ರಯಾಣಿಕರ ಬಸ್‌ ಕೊಲ್ಹಾಪುರದಿಂದ ಮುಂಬೈನ ಡೊಂಬಿವಿಲಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಹಿಂದಿನಿಂದ ಬಂದ ಟ್ರಕ್ ಬಸ್​ಗೆ ಡಿಕ್ಕಿ ಹೊಡಿದಿತ್ತು. ಟ್ರಕ್‌ನ ಬ್ರೇಕ್ ಫೇಲ್ ಆಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಟ್ರಕ್‌ನ ಕ್ಯಾಬಿನ್ ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ಭಾರತಿ ವಿದ್ಯಾಪೀಠ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು.

ಇದನ್ನೂ ಓದಿ:ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, 22 ಮಂದಿಗೆ ಗಾಯ

7 ಮಂದಿ ದಾರುಣ ಸಾವು:ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಖಾಸಗಿ ಬಸ್​ ಮತ್ತು ಟ್ರಕ್​ ಮಧ್ಯೆ ಡಿಕ್ಕಿ ಸಂಭವಿಸಿ 7 ಮಂದಿ ಮೃತಪಟ್ಟ ದಾರುಣ ಘಟನೆ ಏ.21(ಶುಕ್ರವಾರ)ರಂದು ನಡೆದಿತ್ತು. ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್ ಅಂಬೇಡ್ಕರ್‌ ನಗರ ಕಡೆಗೆ ತೆರಳಲು ಹೆದ್ದಾರಿಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿತ್ತು. ಇದರಿಂದ ಬಸ್​ ಮೇಲೆ ಟ್ರಕ್​​ ಉರುಳಿಕೊಂಡು ಬಿದ್ದಿದೆ. ಬಸ್​ನಲ್ಲಿದ್ದ ಜನರ ಪೈಕಿ 7 ಮಂದಿ ಸ್ಥಳದಲ್ಲೇ ಅಸುನೀಗಿ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಘಟನೆಯ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಬಸ್​ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದರು.

ಇದನ್ನೂ ಓದಿ: ತಿರುವಿನಲ್ಲಿ ಡಿಕ್ಕಿಯಾಗಿ ಬಸ್​ ಮೇಲೆ ಉರುಳಿಬಿದ್ದ ಟ್ರಕ್​​: 7 ಮಂದಿ ದಾರುಣ ಸಾವು

ABOUT THE AUTHOR

...view details