ವಾರಂಗಲ್, ತೆಲಂಗಾಣ: ಸಾಲ ಕೊಟ್ಟವರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರಂಗಲ್ ಎನುಮಾಮುಲದ ಬಾಲಾಜಿನಗರದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಸ್ಥಳೀಯರು ಹಾಗೂ ಪೊಲೀಸರ ಪ್ರಕಾರ, ಬಾಲಾಜಿನಗರದ ಗಂಧಂ ಕುಮಾರಸ್ವಾಮಿ (45) ಎನುಮಾಮುಳ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದು, ರಾಜಕೀಯದಲ್ಲಿ ಮುಂದುವರಿದಿದ್ದಾರೆ. ಕಳೆದ ವಾರಂಗಲ್ ಮಹಾನಗರ ಪಾಲಿಕೆ ಚುನಾವಣೆ ವೇಳೆ ಕಾರ್ಪೊರೇಟರ್ ಟಿಕೆಟ್ ಸಿಗದ ಹಿನ್ನೆಲೆ ತೆರಸಾ ತೊರೆದು ಬಿಜೆಪಿ ಸೇರಿದ್ದರು. ಆ ಪಕ್ಷದ ಪರವಾಗಿ ಸ್ಪರ್ಧಿಸಿ ಸೋತಿದ್ದರು.
ಆದರೆ ಸೆಲ್ಫಿ ವಿಡಿಯೋದಲ್ಲಿ ಚುನಾವಣೆ ಸಂದರ್ಭದಲ್ಲಿ ಎನುಮಾಮು ಮಾಜಿ ಸರಪಂಚ್ ಸಾಂಬೇಶ್ವರ್ ಅವರಿಂದ 25 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸೋಲಿನ ನೋವು ಕಾಡುತ್ತಿದ್ದು, ಇನ್ನೊಂದೆಡೆ ಮಾಜಿ ಸರಪಂಚ್ ಹಣಕ್ಕಾಗಿ ಕಿರುಕುಳ ನೀಡಿತ್ತಿದ್ದರಿಂದ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ನಂಬಿದವರು ಮೋಸ ಮಾಡಿದ್ದಾರೆ ಎಂದು ಆತ್ಮಹತ್ಯೆಗೂ ಮುನ್ನ ವಿಡಿಯೋದಲ್ಲಿ ಅಳಲು ತೋಡಿಕೊಂಡರು.
ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡದಂತೆ ಪತ್ರ ಬರೆದಿದ್ದಾರೆ. ಈ ವಿಡಿಯೋವನ್ನು ಸ್ನೇಹಿತರು ಮತ್ತು ಸಹ ವ್ಯಾಪಾರಿಗಳಿಗೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಗಂಧಂ ಕುಮಾರಸ್ವಾಮಿ ಅವರ ಪತ್ನಿ ಇನ್ನೊಂದು ಕೋಣೆಯಲ್ಲಿದ್ದರು. ಬಳಿಕ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಷ್ಟೋತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಪತಿಯ ಸಾವಿಗೆ ಕಾರಣರಾದ ಸಾಂಬೇಶ್ವರ್, ಆತನ ಪತ್ನಿ ಪ್ರಮೀಳಾ ಹಾಗೂ ಮತ್ತೋರ್ವ ಕೋಟ ವಿಜಯಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಪತ್ನಿ ಲಕ್ಷ್ಮಿ ಎನುಮಾಮುಲ ಸಿಐಗೆ ದೂರು ನೀಡಿದ್ದಾರೆ. ಕುಮಾರಸ್ವಾಮಿ ಅವರು ಈ ಹಿಂದೆ ಸಣ್ಣ ಕೈಗಾರಿಕೆ ವಿಭಾಗದಲ್ಲಿ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದಿರುವುದು ಗಮನಾರ್ಹ.
ರಾಜಸ್ಥಾನದಲ್ಲಿ ಮದುವೆ ಸಮಾರಂಭದಲ್ಲಿ ದುರಂತ: ಭಾನುವಾರ ನಡೆದ ಮದುವೆ ಸಮಾರಂಭದಲ್ಲಿ ದುರಂತ ಘಟನೆಯೊಂದು ನಡೆದಿದೆ. ವರನ ಸಹೋದರ ಮತ್ತು ಇನ್ನೊಬ್ಬ ವ್ಯಕ್ತಿ ಕುಡಿದ ಅಮಲಿನಲ್ಲಿ ಗುಂಡು ಹಾರಿಸಿದ್ದು, ಈ ವೇಳೆ ಮಹಿಳೆ ಹಾಗೂ 7 ವರ್ಷದ ಮಗುವಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲ, ಈ ದುರ್ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸ್ಥಳದಿಂದ ಓಡಿ ಹೋಗುತ್ತಿದ್ದ ಆರೋಪಿಗಳಿಬ್ಬರನ್ನೂ ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.