ಮುಂಬೈ:ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿದ್ದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಜೆಸ್ಯೂಟ್ ಪಾದ್ರಿ ಸ್ಟಾನ್ ಸ್ವಾಮಿ ನಿಧನರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಅಧಿಕಾರಿಯೊಬ್ಬರು ಸೋಮವಾರ ಬಾಂಬೆ ಹೈಕೋರ್ಟ್ಗೆ ಈ ಬಗ್ಗೆ ಮಾಹಿತಿ ನೀಡಿದರು.
ಸ್ವಾಮಿ (84) ಸೋಮವಾರ ಮಧ್ಯಾಹ್ನ 1.30ಕ್ಕೆ ನಿಧನರಾದರು ಎಂದು ಉಪನಗರ ಬಾಂದ್ರಾದ ಹೋಲಿ ಫ್ಯಾಮಿಲಿ ಆಸ್ಪತ್ರೆಯ ನಿರ್ದೇಶಕ ಡಾ.ಇಯಾನ್ ಡಿಸೋಜ ಅವರು ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಮತ್ತು ಎನ್.ಜೆ.ಜಮದಾರ್ ಅವರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಳಿಸಿದರು.
ಬುಧವಾರ ಕೋವಿಡ್ -19 ಮತ್ತು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರಿಂದ ವೈದ್ಯಕೀಯ ನೆರವು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ವಾಮಿ ಅವರನ್ನು ಮೇ 29 ರಂದು ತಾಲೋಜ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭಾನುವಾರ ಮುಂಜಾನೆ ಸ್ವಾಮಿಗೆ ಹೃದಯಾಘಾತವಾಯಿತು ಎಂದು ಡಿಸೋಜಾ ನ್ಯಾಯಾಲಯಕ್ಕೆ ತಿಳಿಸಿದರು. ಶ್ವಾಸಕೋಶದ ಸೋಂಕು, ಪಾರ್ಕಿನ್ಸನ್ ಕಾಯಿಲೆ ಮತ್ತು ಕೊರೊನಾ ಸಾವಿಗೆ ಕಾರಣ ಎಂದು ಅವರು ಹೇಳಿದರು.