ಕರ್ನಾಟಕ

karnataka

ETV Bharat / bharat

ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಕಿರಾತಕ..ಲೈವ್​ ವಿಡಿಯೋ - A Man brutally Murdered his Brother in Hyderabad

ಆಸ್ತಿ ವಿಚಾರವಾಗಿ ನಡೆದ ಜಗಳ ತಾರಕಕ್ಕೇರಿದ್ದು, ವ್ಯಕ್ತಿಯೊಬ್ಬ ತನ್ನ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹೈದರಾಬಾದ್​ನಲ್ಲಿ ಜರುಗಿದೆ.

ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಕಿರಾತಕ
ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಕಿರಾತಕ

By

Published : Mar 17, 2021, 10:18 AM IST

Updated : Mar 17, 2021, 10:46 AM IST

ಹೈದರಾಬಾದ್‌ (ತೆಲಂಗಾಣ): ಹೈದರಾಬಾದ್‌ನ ಗೋಲ್ಕೊಂಡದಲ್ಲಿ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಜರುಗಿದೆ.

ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಕಿರಾತಕ..ಲೈವ್​ ವಿಡಿಯೋ

ಆಸ್ತಿ ವಿಚಾರಕ್ಕಾಗಿ ವ್ಯಕ್ತಿಯೊಬ್ಬ ತನ್ನ ಸಹೋದರನನ್ನು ಹತ್ಯೆ ಮಾಡಿದ್ದಾನೆ. ಶೇಖ್​​ಪೇಟ್​​ ನಿವಾಸಿಗಳಾದ ವಿಜಯ್ ಮತ್ತು ನರೇಂದರ್ ಸಹೋದರರ ಮಧ್ಯೆ ಕೆಲವು ದಿನಗಳಿಂದ ಆಸ್ತಿ ವಿಚಾರವಾಗಿ ವೈಮನಸ್ಸು ಉಂಟಾಗಿತ್ತು. ಇದೇ ವಿಚಾರವಾಗಿ ಮಂಗಳವಾರ ರಾತ್ರಿ ಇಬ್ಬರ ನಡುವೆ ವಾಗ್ವಾದ ಆರಂಭವಾಗಿದೆ. ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದು, ನರೇಂದರ್ ತನ್ನ ಸಹೋದರ ವಿಜಯ್ ಮೇಲೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ:ಸೆಪ್ಟಿಕ್​ ಟ್ಯಾಂಕ್​ ಅಗೆಯುವಾಗ ಮಣ್ಣು ಕುಸಿದು ಐವರು ಬಲಿ

ಹಲ್ಲೆಯಿಂದ ಗಂಭೀರ ಗಾಯಗೊಂಡ ವಿಜಯ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ನರೇಂದರ್ ಪರಾರಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಾವು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ಗೋಲ್ಕೊಂಡ ಸಿಐ ಚಂದ್ರ ಶೇಖರ್ ರೆಡ್ಡಿ ಹೇಳಿದ್ದಾರೆ.

Last Updated : Mar 17, 2021, 10:46 AM IST

For All Latest Updates

TAGGED:

ABOUT THE AUTHOR

...view details