ಧುಬ್ರಿ(ಅಸ್ಸೋಂ): ಜಿಲ್ಲೆಯ ತಮಾಹಾತ್ ಗ್ರಾಮದಲ್ಲಿ ಕಾಡಾನೆಯೊಂದು ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆತನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ. ಧುಬ್ರಿ ಜಿಲ್ಲೆಯಲ್ಲಿ ಡಿಸೆಂಬರ್ 18 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Video - ವ್ಯಕ್ತಿಯನ್ನು ಅಟ್ಟಾಡಿಸಿದ ಒಂಟಿ ಸಲಗ... ಕಾಡಾನೆ ದಾಳಿಯಿಂದ ವ್ಯಕ್ತಿ ಸ್ಥಿತಿ ಗಂಭೀರ - ಅಸ್ಸೋಂ ಆನೆ ದಾಳಿ ವಿಡಿಯೋ
ಮದವೇರಿದ ಒಂಟಿ ಸಲಗವೊಂದು ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆತನ ಮೇಲೆ ದಾಳಿ ಮಾಡಿರುವ ಘಟನೆ ಧುಬ್ರಿ ಜಿಲ್ಲೆಯ ತಮಾಹಾತ್ ಗ್ರಾಮದಲ್ಲಿ ನಡೆದಿದೆ.
ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಹೋದ ಕಾಡಾನೆ
ಮದವೇರಿದ ಒಂಟಿ ಸಲಗವು 30 ವರ್ಷದ ವ್ಯಕ್ತಿಯನ್ನು ಅಟ್ಟಾಡಿಸಿದೆ. ಈ ವೇಳೆ ಆತ ಓಡಿಹೋಗುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಆಗ ಅಲ್ಲಿಗೆ ಬಂದ ಗಜರಾಜ ಆ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದೆ.
ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆನೆಯನ್ನು ಕಾಡಿನತ್ತ ಓಡಿಸಲಾಗಿದೆ ಎಂದು ಅರಣ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.