ನವದೆಹಲಿ:ವ್ಯವಸ್ಥಿತವಾಗಿ ಸಂಚು ರೂಪಿಸಿ ತಮ್ಮ ಕಂಪೆನಿ ವಿರುದ್ಧ ಟ್ವಿಟರ್ನಲ್ಲಿ ನಕಲಿ ಸುದ್ದಿಗಳನ್ನು ಹರಿಬಿಡಲಾಗ್ತಿದೆ ಎಂದು ಅದಾನಿ ಸಂಸ್ಥೆ ಆರೋಪಿಸಿ, ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಪತ್ರ ಬರೆದಿದೆ.
ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆಗಳನ್ನು ಉತ್ತೇಜಿಸಲು ಮತ್ತು ಸ್ಥಳೀಯವಾಗಿ ಉದ್ಯೋಗಗಳನ್ನು ಸೃಷ್ಟಿಸಿ ಭಾರತವನ್ನು ಸ್ವಾವಲಂಬಿಯಾಗಿ ರೂಪಿಸುವತ್ತ ಗಮನ ಹರಿಸುತ್ತಿರುವ ಕೇಂದ್ರದ ಅಭಿಯಾನವನ್ನು ಅದಾನಿ ಗ್ರೂಪ್ಸ್ ಪ್ರಾರಂಭಿಸಿದೆ. ಹೀಗಿದ್ದರೂ ಸಹ ತಮ್ಮ ವಿರುದ್ಧ ಈ ರೀತಿಯ ನಕಲಿ ಸುದ್ದಿಗಳನ್ನು ಮಾಡಲಾಗ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.
ಹೂಡಿಕೆ ಮಾಡಿದ ಸಾರ್ವಜನಿಕ ಹಣವನ್ನು ರಕ್ಷಿಸುವ ಸಲುವಾಗಿ ಭಾರತೀಯ ಸಂಸ್ಥೆಗಳು ಮತ್ತು ವ್ಯವಹಾರಗಳನ್ನು ಗುರಿಯಾಗಿಸಿಕೊಂಡು ಈ ಪಿತೂರಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಸಂಸ್ಥೆ ಆರೋಪಿಸಿದೆ.