ಕರ್ನಾಟಕ

karnataka

ETV Bharat / bharat

ಕೃಷಿ ಕಾಯ್ದೆ ರದ್ಧತಿ ಬದಲು ಪರ್ಯಾಯ ಕ್ರಮದ ಕುರಿತು ಚಿಂತನೆ: ಸಚಿವ ತೋಮರ್​ - ಕೃಷಿ ಕಾಯ್ದೆ ರದ್ಧತಿ ಸಂಬಂಧ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿಕೆ

ಕೃಷಿ ಸುಧಾರಣಾ ಕಾನೂನುಗಳ ರದ್ದುಪಡಿಸುವುದನ್ನು ಹೊರತುಪಡಿಸಿ ಪ್ರತಿಭಟನಾನಿರತ ರೈತರು ಪರ್ಯಾಯ ಕ್ರಮಗಳ ಕುರಿತು ಚಿಂತನೆ ನಡೆಸಬೇಕಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

Agriculture Minister Tomar
ಕೃಷಿ ಸುಧಾರಣಾ ಕಾನೂನು

By

Published : Jan 19, 2021, 9:33 AM IST

ಗ್ವಾಲಿಯರ್(ಮಧ್ಯಪ್ರದೇಶ)​: ಕೃಷಿ ಸುಧಾರಣಾ ಕಾಯ್ದೆ ಹಿಂಪಡೆಯುವುದನ್ನು ಹೊರತುಪಡಿಸಿ, ಪ್ರತಿಭಟನಾನಿರತ ರೈತರು ಪರ್ಯಾಯ ಕ್ರಮಗಳ ಕುರಿತು ಚಿಂತನೆ ನಡೆಸಬೇಕಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

41 ಕೃಷಿ ಸಂಘಗಳೊಂದಿಗೆ ಮತ್ತು ಸರ್ಕಾರದ ನಡುವಿನ 10ನೇ ಸುತ್ತಿನ ಮಾತುಕತೆಯಲ್ಲಿ, ಕೃಷಿ ಸುಧಾರಣೆಯ ಕುರಿತು ಸಮಗ್ರ ಚರ್ಚೆ ನಡೆಸುವಂತೆ ಹಾಗೂ ಪರ್ಯಾಯ ಮಾರ್ಗಗಳನ್ನು ಪ್ರಸ್ತುತಪಡಿಸುವಂತೆ ಪ್ರತಿಭಟನಾನಿರತ ರೈತರಿಗೆ ಸಚಿವರು ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ತೋಮರ್ "ರೈತ ಸಂಘಗಳು ಪರ್ಯಾಯ ಮಾರ್ಗಗಳನ್ನು (ಕಾನೂನುಗಳನ್ನು ರದ್ದುಪಡಿಸುವುದನ್ನು ಹೊರತುಪಡಿಸಿ) ಚರ್ಚಿಸಲಿದ್ದು, ಇದರಿಂದ ನಾವು ಪರಿಹಾರವನ್ನು ಕಂಡುಹಿಡಿಯಬಹುದು. ನಾವು ಇಲ್ಲಿಯವರೆಗೆ ಒಂಬತ್ತು ಸುತ್ತಿನ ಮಾತುಕತೆ ನಡೆಸಿದ್ದೇವೆ. ರೈತ ಸಂಘಗಳು ಕಾನೂನುಗಳ ನಿಬಂಧನೆಗಳ ಬಗ್ಗೆ ಚರ್ಚಿಸಬೇಕು ಎಂದು ಹೇಳಿದ್ದೇನೆ. ಸರ್ಕಾರವು ಚರ್ಚಿಸುತ್ತಿದೆ ಮತ್ತು ಕಾನೂನುಗಳ ನಿಬಂಧನೆಗಳಲ್ಲಿ ಯಾವುದೇ ಸಮಸ್ಯೆಯನ್ನು ಅವರು ಗಮನಿಸಿದರೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸದಾ ಸಿದ್ಧ " ಎಂದರು.

ಇದನ್ನು ಓದಿ: ಕರ್ನಾಟಕದ ಬಳಿಕ ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ... ಟ್ರಕ್​ ಹರಿದು 15 ಕೂಲಿ ಆಳುಗಳು ಬಲಿ!

ಸರ್ಕಾರ, ಈಗಾಗಲೇ ರೈತ ಸಂಘಟನೆಗಳಿಗೆ ಪ್ರಸ್ತಾವನೆ ಕಳುಹಿಸಿದ್ದು, ವ್ಯಾಪಾರಿಗಳ ನೋಂದಣಿ ಮತ್ತು ಇತರ ಸಂದೇಹಗಳ ಕುರಿತು ಸ್ಪಷ್ಟೀಕರಣ ನೀಡಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ.

ಇನ್ನು ರೈತರ ಟ್ರ್ಯಾಕ್ಟರ್​ ರ‍್ಯಾಲಿ ಬಗ್ಗೆ ಮಾತನಾಡಿದ ಅವರು "ಜನವರಿ 26ರಂದು ನಮ್ಮ ಗಣರಾಜ್ಯೋತ್ಸವ ದಿನ. ಅನೇಕರ ತ್ಯಾಗದ ನಂತರ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಗಣರಾಜ್ಯೋತ್ಸವದ ಘನತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ರೈತರ ಜವಾಬ್ದಾರಿಯಾಗಿದೆ. ಅವರು ತಮ್ಮ ನಿರ್ಧಾರವನ್ನು ಮರು ಪರಿಶೀಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ" ಎಂದರು.

ABOUT THE AUTHOR

...view details