ಕರ್ನಾಟಕ

karnataka

ETV Bharat / bharat

ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ: ಸೇನೆಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ

ಜಮ್ಮು ಕಾಶ್ಮೀರದಲ್ಲಿ ಸುರಿದ ಭಾರಿ ಮಳೆಗೆ ಸೇತುವೆಯೊಂದು ಕೊಚ್ಚಿಹೋಗಿದ್ದು, ಸದ್ಯ ಭಾರತೀಯ ಸೇನೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿದೆ.

By

Published : Jun 4, 2021, 7:56 PM IST

ತಾತ್ಕಾಲಿಕ ಸೇತುವೆ ನಿರ್ಮಾಣ
ತಾತ್ಕಾಲಿಕ ಸೇತುವೆ ನಿರ್ಮಾಣ

ರಜೌರಿ:ಭಾರಿ ಮಳೆ ಮತ್ತು ಚಳಿಯ ನಡುವೆ ಭಾರತೀಯ ಸೇನೆ 30 ಅಡಿ ಉದ್ದದ ಸೇತುವೆಯನ್ನು ಜಮ್ಮು ಕಾಶ್ಮೀರದ ಸತರ್​ಬನ್​ ಪ್ರದೇಶದ ಜಮೈ ನಾಲಾದ ಮೇಲೆ ನಿರ್ಮಿಸಿದೆ. ಈ ಬಗ್ಗೆ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸೇತುವೆ ಕೊಚ್ಚಿಹೋಗಿದೆ. ಈ ಹಿನ್ನೆಲೆಯಲ್ಲಿ ಸೇನೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿದೆ. ಇನ್ನು 1500 ಜಾನುವಾರುಗಳನ್ನು ಹೊಂದಿರುವ 8 ಡೇರಾ ವಲಸೆ ಕುಟುಂಬಗಳನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ, ನೆಲದಿಂದ 9000 ಅಡಿ ಎತ್ತರದಲ್ಲಿರುವ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಕೊಚ್ಚಿಹೋಗಿದ್ದು, ಸೇನೆ ತಾತ್ಕಾಲಿಕವಾಗಿ ಮತ್ತೊಂದು ಸೇತುವೆ ನಿರ್ಮಾಣ ಮಾಡಿದೆ" ಎಂದು ಹೇಳಿದೆ.

ABOUT THE AUTHOR

...view details