ನವದೆಹಲಿ:ಬಾಲಕೋಟ್ ಏರ್ಸ್ಟ್ರೈಕ್ ನಡೆಸಿ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದು, ಪುಲ್ವಾಮಾ ಭಯೋತ್ಪಾದನಾ ದಾಳಿಗೆ ನೀಡಿದ ಪ್ರತ್ಯುತ್ತರವನ್ನು ಸ್ಮರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ 2019ರ ಇಂದಿನ ದಿನ, ಭಾರತೀಯ ವಾಯುಪಡೆ ಭಯೋತ್ಪಾದನಾ ದಾಳಿಯ ವಿರುದ್ಧದ ನೀತಿಯನ್ನು ಪ್ರಚುರಪಡಿಸಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸೂಚಿಸಿದ ಅಮಿತ್ ಶಾ, ಏರ್ಸ್ಟ್ರೈಕ್ನಲ್ಲಿ ಪಾಲ್ಗೊಂಡ ಯೋಧರ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಭಾರತೀಯ ಸೇನೆ ಸುರಕ್ಷಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.