ಕರ್ನಾಟಕ

karnataka

ETV Bharat / bharat

ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾ - ಅಮರನಾಥ ಯಾತ್ರೆಯ ಸಿದ್ಧತೆಯ ಬಗ್ಗೆ ಅವಲೋಕನ

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಮತ್ತು ಭದ್ರತಾ ಏಜೆನ್ಸಿಗಳ ಮುಖ್ಯಸ್ಥರನ್ನು ಒಳಗೊಂಡ ಉನ್ನತ ಮಟ್ಟದ ಸಭೆಯೂ ಅಮಿತ್​ ಶಾ ನೇತೃತ್ವದಲ್ಲಿ ನಡೆಯಿತು. ಈ ಸಭೆಯಲ್ಲಿ ಎರಡು ವರ್ಷಗಳ ನಂತರ ಜೂನ್ 30 ರಂದು ಪ್ರಾರಂಭವಾಗಲಿರುವ ಅಮರನಾಥ ಯಾತ್ರೆಯ ಸಿದ್ಧತೆಯ ಬಗ್ಗೆ ಅವಲೋಕನ ನಡೆಸಲಾಯಿತು.

Amit Shah
ಅಮಿತ್​ ಶಾ

By

Published : May 17, 2022, 3:57 PM IST

ನವದೆಹಲಿ:ಜಮ್ಮು ಮತ್ತು ಕಾಶ್ಮೀರಲ್ಲಿ ಇತ್ತೀಚಿನ ದಿನಗಳಲ್ಲಿ ಕಾಶ್ಮೀರಿ ಪಂಡಿತರು ಸೇರಿದಂತೆ ಹಲವಾರು ಉದ್ದೇಶಿತ ಹತ್ಯೆಗಳು ನಡೆಯುತ್ತಿವೆ. ಹೀಗಾಗಿ ಅಲ್ಲಿನ ಭದ್ರತಾ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪರಿಶೀಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಅಮಿತ್​ ಶಾ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಮತ್ತು ಭದ್ರತಾ ಏಜೆನ್ಸಿಗಳ ಮುಖ್ಯಸ್ಥರನ್ನೊಳಗೊಂಡ ಉನ್ನತ ಮಟ್ಟದ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಎರಡು ವರ್ಷಗಳ ನಂತರ ಜೂನ್ 30ರಿಂದ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆಯ ಸಿದ್ಧತೆಯ ಬಗ್ಗೆ ಚರ್ಚೆ ನಡೆಸಲಾಗಿದೆ.

ಮೇ 12 ರಂದು ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಬುದ್ಗಾಮ್ ಜಿಲ್ಲೆಯ ಅವರ ಕಚೇರಿಯಲ್ಲಿ ಭಯೋತ್ಪಾದಕರು ಕೊಂದಿದ್ದರು. ಇದಾದ ಒಂದು ದಿನದ ನಂತರ, ಪೊಲೀಸ್ ಪೇದೆ ರಿಯಾಜ್ ಅಹ್ಮದ್ ಥೋಕರ್ ಎಂಬುವರನ್ನು ಪುಲ್ವಾಮಾ ಜಿಲ್ಲೆಯ ಅವರ ನಿವಾಸದಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಕಳೆದ ವಾರ, ಜಮ್ಮುವಿನ ಕತ್ರಾ ಬಳಿ ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಯಾತ್ರಿಕರು ಮೃತಪಟ್ಟು, ಕನಿಷ್ಠ 20 ಮಂದಿ ಗಾಯಗೊಂಡಿದ್ದರು. ಈ ಎಲ್ಲಾ ಘಟನೆಗಳ ಬಳಿಕ ಅಮಿತ್​​ ಶಾ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಮೌಂಟ್​ ಎವರೆಸ್ಟ್​ ಏರಿದ ತೆಲಂಗಾಣದ 24 ವರ್ಷದ ಯುವತಿ

ನೌಕರ ರಾಹುಲ್ ಹತ್ಯೆ ಪಂಡಿತ ಸಮುದಾಯದವರಲ್ಲಿ ವ್ಯಾಪಕ ಆಕ್ರೋಶ, ಸಿಟ್ಟು ಮತ್ತು ಆತಂಕಕ್ಕೆ ಕಾರಣವಾಗಿರುವ ಬೆನ್ನಲ್ಲೇ ಅಮಿತ್ ಶಾ ಸಭೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಮುಖ ಜಮ್ಮು-ಕಾಶ್ಮೀರ ಪಕ್ಷಗಳ ಒಕ್ಕೂಟವಾದ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್ (ಪಿಎಜಿಡಿ) ಭಾನುವಾರ ಕಾಶ್ಮೀರಿ ಪಂಡಿತ ಉದ್ಯೋಗಿಗಳು ಕಣಿವೆಯನ್ನು ತೊರೆಯದಂತೆ ಒತ್ತಾಯಿಸಿದೆ. ಇತ್ತೀಚಿನ ಹಿಂಸಾಚಾರದ ಘಟನೆಗಳನ್ನು ನೋಡಿದ್ರೆ, ಅಮರನಾಥ ಯಾತ್ರೆಯು ಸುಗಮವಾಗಿ ಆಗುವಂತೆ ನೋಡಿಕೊಳ್ಳುವುದು ಭದ್ರತಾ ಸವಾಲಾಗಿದೆ.

ಹೀಗಾಗಿ ಕೇಂದ್ರ ಸರ್ಕಾರವು ಕನಿಷ್ಠ 12,000 ಅರೆಸೇನಾ ಸಿಬ್ಬಂದಿ ಮತ್ತು ಸಾವಿರಾರು ಜಮ್ಮು- ಕಾಶ್ಮೀರ ಪೊಲೀಸರನ್ನು ನಿಯೋಜಿಸಲಿದೆ. ಸುಮಾರು ಮೂರು ಲಕ್ಷ ಯಾತ್ರಿಕರು ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಇದು ಆಗಸ್ಟ್ 11 ರಂದು ಕೊನೆಗೊಳ್ಳುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವಾಲಯವು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಏಜೆನ್ಸಿಗಳಿಗೆ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

For All Latest Updates

ABOUT THE AUTHOR

...view details