ಕರ್ನಾಟಕ

karnataka

By

Published : Jan 25, 2022, 7:19 PM IST

ETV Bharat / bharat

ಕಾರು ಖರೀದಿಗೆ ಹೋಗಿದ್ದ ತುಮಕೂರು ರೈತನಿಗೆ ಅವಮಾನ : ಟ್ವೀಟ್ ಮಾಡಿ ಆನಂದ್ ಮಹೀಂದ್ರಾ ಹೇಳಿದ್ರು ಈ ಮಾತು!

Anand Mahindra Reaction on Tumkuru Show room incident : ವಾಹನ ಖರೀದಿಸಲು ರೈತನೋರ್ವ ಕಾರು ಶೋ ರೂಮ್​ಗೆ ತೆರಳಿದ್ದ ವೇಳೆ ಅಲ್ಲಿನ ಸಿಬ್ಬಂದಿ ಹೀಯಾಳಿಸಿ ಕಳಿಸಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಅವಮಾನಕ್ಕೊಳಗಾಗಿದ್ದ ಗ್ರಾಹಕ, ಒಂದೇ ತಾಸಲ್ಲಿ 10 ಲಕ್ಷ ರೂ. ತೆಗೆದುಕೊಂಡು ಹೋಗಿದ್ದರು..

Anand Mahindra tweet on Farmer humiliated case
Anand Mahindra tweet on Farmer humiliated case

ನವದೆಹಲಿ :ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿರುವ ತಮ್ಮ ಶೋರೂಮ್​ಗೆ ಕಾರು ಖರೀದಿಸಲು ಬಂದಿದ್ದ ರೈತನೋರ್ವನಿಗೆ ಆತ ಧರಿಸಿದ್ದ ಬಟ್ಟೆ ನೋಡಿ ಕಾರು ಶೋ ರೂಮ್​ ಸಿಬ್ಬಂದಿ ಹೀಯಾಳಿಸಿರುವ ಘಟನೆ ಇತ್ತೀಚೆಗೆ ನಡೆದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹೀಂದ್ರಾ ಆ್ಯಂಡ್​ ಮಹೀಂದ್ರಾ ಕಂಪನಿ ಮುಖ್ಯಸ್ಥ ಆನಂದ್ ಮಹೀಂದ್ರಾ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲ ವ್ಯಕ್ತಿಗಳ ಘನತೆ ಎತ್ತಿ ಹಿಡಿಯುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.

ನಮ್ಮ ಸಮುದಾಯಗಳು ಮತ್ತು ಎಲ್ಲ ಪಾಲುದಾರರಿಗೆ ಶಕ್ತಿ ತುಂಬುವುದು ಮಹೀಂದ್ರಾ ಕಂಪನಿಯ ಪ್ರಮುಖ ಮೌಲ್ಯವಾಗಿದೆ. ಈ ನಿರ್ಧಾರಗಳಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಲು ಸಾಧ್ಯವಿಲ್ಲ. ಈ ನೀತಿಗಳಿಗೆ ವಿರುದ್ಧವಾಗಿ ನಡೆಯುವ ಬೆಳವಣಿಗೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ವಾಹನ ಖರೀದಿಸಲು ರೈತನೋರ್ವ ಕಾರು ಶೋ ರೂಮ್​ಗೆ ತೆರಳಿದ್ದ ವೇಳೆ ಅಲ್ಲಿನ ಸಿಬ್ಬಂದಿ ಹೀಯಾಳಿಸಿ ಕಳಿಸಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಅವಮಾನಕ್ಕೊಳಗಾಗಿದ್ದ ಗ್ರಾಹಕ, ಒಂದೇ ತಾಸಲ್ಲಿ 10 ಲಕ್ಷ ರೂ. ತೆಗೆದುಕೊಂಡು ಹೋಗಿದ್ದರು.

ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಕಂಪನಿಯ ಸಿಇಒ ವಿಜಯ್ ನಕ್ರಾ ಹಾಗೂ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಗೆ ಟ್ಯಾಗ್​ ಮಾಡಿದ್ದರು.

ಇದನ್ನೂ ಓದಿರಿ:ಬಟ್ಟೆ ನೋಡಿ ಶೋ ರೂಮ್ ಸಿಬ್ಬಂದಿ ಅವಮಾನಿಸಿದ ಆರೋಪ: ಕೆರಳಿದ 'ಕೆಂಪೇಗೌಡ' ಮಾಡಿದ್ದೇನು?

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಂಪನಿಯ ಸಿಇಒ ವಿಜಯ್​ ನಕ್ರಾ ಕೂಡ ಗ್ರಾಹಕರಿಗೆ ಉತ್ತಮವಾದ ಸೇವೆ ಒದಗಿಸಬೇಕು. ಅವರನ್ನ ಗೌರವ ಮತ್ತು ಘನತೆಯಿಂದ ಕಾಣಬೇಕು ಎಂಬುದು ನಮ್ಮ ನಿಯಮವಾಗಿದೆ. ತುಮಕೂರಿನಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details