ಶ್ರೀಕಾಕುಳಂ(ಆಂಧ್ರಪ್ರದೇಶ) : ಶ್ರೀಕಾಕುಳಂ ಜಿಲ್ಲೆಯ ಸುನ್ನಡ ಗ್ರಾಮದ ಗಣೇಶ ಪೆಂಡಲ್ವೊಂದರಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಸುನ್ನಡ ಗ್ರಾಮದ ಸುರೇಶ್ ಕುಮಾರ್ (28) ಎಂದು ಗುರುತಿಸಲಾಗಿದೆ.
ಸುನ್ನಡ ಗ್ರಾಮದಲ್ಲಿ ಚತುರ್ಥಿ ದಿನದಂದು ಗಣೇಶ ಪ್ರತಿಷ್ಠಾಪನೆ ಮಾಡಿದ್ದು, ಮಂಗಳವಾರ ಆಯೋಜಕರು ಗಣೇಶ ಪಂದಳ ಮತ್ತು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಘೋಷಣೆಗಾಗಿ ಎಲೆಕ್ಟ್ರಿಕ್ ಮೈಕ್ ಹಿಡಿದಿದ್ದ ಸುರೇಶ್ ಕುಮಾರ್ಗೆ ಏಕಾಏಕಿ ವಿದ್ಯುತ್ ತಗುಲಿದ ಪರಿಣಾಮ ಸಾವನ್ನಪ್ಪಿದ್ದಾನೆ.