ಖಮ್ಮಂ(ಆಂಧ್ರಪ್ರದೇಶ): ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕ ನಿಶ್ಚಿತಾರ್ಥದ ಹಿಂದಿನ ದಿನ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ.
2020ರಲ್ಲಿ ಅಶೋಕ್ ಕುಮಾರ್ ಆಂಧ್ರಪ್ರದೇಶ ಪೊಲೀಸ್ ಇಲಾಖೆಗೆ ಕಾನ್ಸ್ಟೇಬಲ್ ಆಗಿ ನೇಮಕಗೊಂಡಿದ್ದರು. ಮೂಲತ ಖಮ್ಮಂ ಜಿಲ್ಲೆಯ ಯಜ್ಞನಾರಾಯಣಪುರದ ಇವರು ಆರಂಭದಲ್ಲಿ ಕೊಟ್ಟಗುಡೆಂ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದಾದ ಬಳಿಕ ಬೇರೊಂದು ಜಿಲ್ಲೆಗೆ ವರ್ಗಾವಣೆಯಾಗಿದ್ದರು.