ಕರ್ನಾಟಕ

karnataka

By

Published : Mar 20, 2021, 9:57 PM IST

Updated : Mar 20, 2021, 10:46 PM IST

ETV Bharat / bharat

ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸಲು ವಾಜೆ ಮೇಲೆ ಅನಿಲ್​ ದೇಶಮುಖ್​ ಒತ್ತಡ: ಪರಮ್​ ಬೀರ್​ ಸಿಂಗ್

ಮುಖೇಶ್​ ಅಂಬಾನಿ ಮನೆ ಮುಂದೆ ನಿಲ್ಲಿಸಿd್ದ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದ್ದು, ಗೃಹ ಸಚಿವ ಅನಿಲ್ ದೇಶ್​ಮುಖ್​ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ.

Anil Deshmukh
Anil Deshmukh

ಮುಂಬೈ:ಪ್ರತಿ ತಿಂಗಳು 100 ಕೋಟಿ ರೂ. ಹಣ ಸಂಗ್ರಹ ಮಾಡುವಂತೆ ಮುಂಬೈ ಪೊಲೀಸ್​​ ಅಧಿಕಾರಿ ಸಚಿನ್​ ವಾಜೆಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್​ ದೇಶ್​ಮುಖ್​​ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್​ ಆಯುಕ್ತ​ ಪರಮ್​​ ಬೀರ್​​ ಸಿಂಗ್​ ಆರೋಪ ಮಾಡಿದ್ದಾರೆ.

ಮುಂಬೈ ನಗರ ಪೊಲೀಸ್​ ಆಯುಕ್ತರಾಗಿದ್ದ ಪರಮ್ ಬೀರ್​ ಸಿಂಗ್​​ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಪ್ರಮುಖವಾಗಿ ಬಾರ್​​ ಅಂಡ್ ರೆಸ್ಟೋರೆಂಟ್​ಗಳಿಂದ 100 ಕೋಟಿ ರೂ. ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದಿರುವ ಅವರು, ಸುಮಾರು 1,750 ಬಾರ್​​ ಹಾಗೂ ರೆಸ್ಟೋರೆಂಟ್​​ಗಳ ಮೇಲೆ ಟಾರ್ಗೆಟ್ ಮಾಡುವಂತೆ ಹೇಳಿದ್ದರು ಎಂದಿದ್ದಾರೆ. ಜತೆಗೆ ಪ್ರತಿ ಒಂದು ಕಡೆಯಿಂದ 2ರಿಂದ 3 ಲಕ್ಷ ಹಣ ಸಂಗ್ರಹ ಮಾಡಿದರೆ 40-50 ಕೋಟಿ ಆಗಲಿದ್ದು, ಉಳಿದ ಹಣ ಬೇರೆ ಮೂಲಗಳಿಂದ ಸಂಗ್ರಹ ಮಾಡುವಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ಆದರೆ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪವನ್ನು ದೇಶ್​ಮುಖ್​ ಅಲ್ಲಗಳೆದಿದ್ದಾರೆ. ಇನ್ನು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಜನತಾ ಪಾರ್ಟಿ, ತಕ್ಷಣವೇ ದೇಶ್​ಮುಖ್​ ಅವರನ್ನ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದೆ. ಮುಂಬೈ ಪೊಲೀಸ್ ಅಧಿಕಾರಿಯಾಗಿದ್ದ ಸಚಿನ್​ ವಾಜೆ ಹೆಸರು ಮುಖೇಶ್ ಅಂಬಾನಿ ಅವರ ಮನೆ ಮುಂದೆ ನಿಲ್ಲಿಸಿದ ಸ್ಫೋಟಕ ತುಂಬಿದ್ದ ವಾಹನ ಪ್ರಕರಣದಲ್ಲಿ ಕೇಳಿ ಬಂದಿದೆ.

Last Updated : Mar 20, 2021, 10:46 PM IST

ABOUT THE AUTHOR

...view details