ಅಹ್ಮದ್ನಗರ: ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ವಿಫಲವಾದರೆ ಈ ತಿಂಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮ ಹೇಳಿಕೆಯನ್ನು ಈ ಸಂಬಂಧ ಬಿಡುಗಡೆ ಮಾಡಿರುವ ಹಜಾರೆ, ಕಳೆದ ಮೂರು ವರ್ಷಗಳಿಂದ ಸರ್ಕಾರ ಅವರನ್ನು ಕಡೆಗಣಿಸುತ್ತಿದೆ ಎಂದು ಹೇಳಿದ್ದಾರೆ. ಈ ಹಿಂದೆ ಡಿಸೆಂಬರ್ನಲ್ಲಿ ಹಜಾರೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ಗೆ ಪತ್ರ ಬರೆದಿದ್ದು, ಅವರ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವ ಎಚ್ಚರಿಕೆ ನೀಡಿದ್ದರು.