ಕರ್ನಾಟಕ

karnataka

ETV Bharat / bharat

ರೈತರಿಗೆ ಬಂಪರ್​​​​​​​​​​: ಪ್ರತಿ ಎಕರೆಗೆ 1500 ರೂ. ಸಬ್ಸಿಡಿ ನೀಡಲು ಭಗವಂತ್​ ಮಾನ್​ ತೀರ್ಮಾನ!

ಪ್ರತಿ ಎಕರೆಗೆ 1500 ರೂ. ಸಹಾಯಧನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಟ್ವೀಟ್​ನಲ್ಲಿ ಭಗವಂತ್ ಮಾನ್​ ಹೇಳಿದ್ದಾರೆ. ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನೇರವಾಗಿ ಜೋಶೆನ್ ಬಿತ್ತನೆ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಸಿಎಂ ಮಾನ್ ಟ್ವೀಟ್ ನಲ್ಲಿ ರಾಜ್ಯದ ರೈತರಿಗೆ ಮನವಿ ಮಾಡಿದ್ದಾರೆ.

By

Published : May 18, 2022, 3:54 PM IST

Approved 1500 rupees per acre subsidy to the farmers in cabinet meeting
ರೈತರಿಗೆ ಬಂಪರ್​​​​​​​​​​: ಪ್ರತಿ ಎಕರೆಗೆ 1500 ರೂ. ಸಬ್ಸಿಡಿ ನೀಡಲು ಭಗವಂತ್​ ಮಾನ್​ ತೀರ್ಮಾನ!

ಚಂಡೀಗಢ( ಪಂಜಾಬ್​):ಒಂದು ಕಡೆ ಮೊಹಾಲಿ ಚಂಡೀಗಢದಲ್ಲಿ ರೈತರ ಧರಣಿ ನಡೆಯುತ್ತಿದ್ದರೆ, ಇನ್ನೊಂದೆಡೆ ಸಿಎಂ ಭಗವಂತ್ ಮಾನ್ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಸಭೆಯಲ್ಲಿ ಪ್ರತಿ ಎಕರೆಗೆ 1500 ರೂ.ಗಳ ಸಹಾಯ ಧನ ನೀಡುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸಿಎಂ ಸಭೆ ಬಳಿಕ ಟ್ವೀಟ್​ ಕೂಡಾ ಮಾಡಿದ್ದಾರೆ.

ಟ್ವೀಟ್​​ನಲ್ಲಿ ಏನಿದೆ?:ಪ್ರತಿ ಎಕರೆಗೆ 1500 ರೂ. ಸಹಾಯಧನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಟ್ವೀಟ್​ನಲ್ಲಿ ಭಗವಂತ್ ಮಾನ್​ ಹೇಳಿದ್ದಾರೆ. ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನೇರವಾಗಿ ಜೋಶೆನ್ ಬಿತ್ತನೆ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಸಿಎಂ ಮಾನ್ ಟ್ವೀಟ್ ನಲ್ಲಿ ರಾಜ್ಯದ ರೈತರಿಗೆ ಮನವಿ ಮಾಡಿದ್ದಾರೆ. ಇದೇ ವೇಳೆ, ಈ ನಿಟ್ಟಿನಲ್ಲಿ ರೈತರನ್ನು ಪ್ರೋತ್ಸಾಹಿಸಬೇಕು. ನೆಲ, ಜಲ ಉಳಿಸಲು ಎಲ್ಲರೂ ಮುಂದಾಗಬೇಕು ಎಂದು ಮನವಿ ಮಾಡಿರುವ ಅವರು, ಇದರ ಜತೆಗೆ ಸಂಪುಟ ಸಭೆಯ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ.

ರೈತರ ಧರಣಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಹಾಲಿ ಚಂಡೀಗಢ ಗಡಿಯಲ್ಲಿ ರೈತರು ಧರಣಿ ಹಮ್ಮಿಕೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಪಟ್ಟು ಹಿಡಿದಿದ್ದಾರೆ. ಸದ್ಯ ಮುಖ್ಯಮಂತ್ರಿ ಭಗವಂತ್ ಮಾನ್ ರೈತ ಸಂಘಟನೆಗಳ ಜೊತೆ ಸಭೆ ಕೂಡಾ ನಡೆಸುತ್ತಿದ್ದಾರೆ.

ಈ ಹಿಂದಿನ ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು: ಕಳೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ 26 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಸಿಎಂ ಅನುಮೋದನೆ ನೀಡಿದ್ದರು. ಮನೆ ಮನೆಗೆ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ಸೇರಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು.

For All Latest Updates

ABOUT THE AUTHOR

...view details