ನವದೆಹಲಿ: ಭಾರತ - ಚೀನಾ ವಿಷಯದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಅವರು, (ರಾಹುಲ್) ಭಾರತದ ಭೂಪ್ರದೇಶವನ್ನು ಚೀನಾಕ್ಕೆ ಯಾರು ಬಿಟ್ಟುಕೊಟ್ಟರು ಎಂಬ ಬಗ್ಗೆ ತಮ್ಮ ಅಜ್ಜ (ಮಾಜಿ ಪ್ರಧಾನಿ ಜವಾಹರಲಾಲ್ ನೆಹರು) ಅವರಿಗೆ ಕೇಳಬೇಕು ಎಂದು ಕುಟುಕಿದ್ದಾರೆ.
ಭಾರತದ ಭೂಪ್ರದೇಶವನ್ನು ಚೀನಾಕ್ಕೆ ಯಾರು ಬಿಟ್ಟುಕೊಟ್ಟಿದ್ದಾರೆ ಎಂಬ ಬಗ್ಗೆ ಅವರು ತಮ್ಮ ಅಜ್ಜ (ಜವಾಹರಲಾಲ್ ನೆಹರು) ಅವರನ್ನು ಕೇಳಬೇಕು. ಆಗ ಅವರಿಗೆ ಉತ್ತರ ಏನು ಎಂಬುದು ಗೊತ್ತಾಗುತ್ತದೆ ಎಂದು ತಿಳಿಯುತ್ತದೆ ಎಂದು ಎದಿರೇಟು ನೀಡಿದ್ದಾರೆ. ಯಾರು ದೇಶಭಕ್ತರು ಮತ್ತು ಯಾರು ಅಲ್ಲ ಎಂಬುದು ಸಾರ್ವಜನಿಕರಿಗೆ ತಿಳಿದಿದೆ ಎಂದು ಇದೇ ವೇಳೆ ರೆಡ್ಡಿ ಟಾಂಗ್ ಕೊಟ್ಟಿದ್ದಾರೆ.