ಕರ್ನಾಟಕ

karnataka

ಸೋಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲು ತೂರಾಟ

By

Published : Jul 4, 2021, 7:52 PM IST

ಮಹಾರಾಷ್ಟ್ರದ ಸೋಲಾಪುರದಲ್ಲಿ ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಕೆಲ ಯುವಕರು ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

attack on karnataka  transport bus in solapur
ಬಸ್​ ಮೇಲೆ ಕಲ್ಲು ತೂರಾಟ

ಸೋಲಾಪುರ/ಮಹಾರಾಷ್ಟ್ರ: ಮರಾಠಾ ಮೀಸಲಾತಿಗಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರು ಕರ್ನಾಟಕದ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ, ಆದರೆ ಕಲ್ಲು ತೂರಾಟದಿಂದ ಬಸ್ ಗಾಜಿಗೆ ಹಾನಿಯಾಗಿದೆ.

ಬಸ್​ ಮೇಲೆ ಕಲ್ಲು ತೂರಾಟ

ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ಮರಾಠಾ ಕ್ರಾಂತಿ ಮೋರ್ಚಾ ವತಿಯಿಂದ ಸೋಲಾಪುರದಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಿಲ್ಲ.

ಆದರೂ ಮೋರ್ಚಾದ ಸಂಘಟಕರು ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆಯ ಬಳಿಕ ಕೆಲವು ಯುವಕರು ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ​ಕರ್ನಾಟಕದ ತೆರದಾಳದಿಂದ ಸೋಲಾಪುರಕ್ಕೆ ಸಂಚರಿಸುತ್ತಿದ್ದ ಬಸ್​ ಮೇಲೂ ಕಲ್ಲು ತೂರಿದ್ದಾರೆ. ಪೊಲೀಸರು ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details