ಕರ್ನಾಟಕ

karnataka

By

Published : Aug 3, 2022, 5:45 PM IST

ETV Bharat / bharat

ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ನಾಲ್ವರು ಕಾರ್ಮಿಕರು ಸಾವು.. ಇಬ್ಬರ ಸ್ಥಿತಿ ಗಂಭೀರ

ಅನಿಲ ಸೋರಿಕೆಯಿಂದ ಭಾರಿ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ಕು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದರೆ, ಇಬ್ಬರು ಸ್ಥಿತಿ ಗಂಭೀರವಾಗಿದೆ.

ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ನಾಲ್ವರು ಕಾರ್ಮಿಕರು ಸಾವು.. ಇಬ್ಬರ ಸ್ಥಿತಿ ಗಂಭೀರ
ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ನಾಲ್ವರು ಕಾರ್ಮಿಕರು ಸಾವು.. ಇಬ್ಬರ ಸ್ಥಿತಿ ಗಂಭೀರ

ಬಹದೂರ್​ಗಡ್​(ಹರಿಯಾಣ):ಕೈಗಾರಿಕಾ ಪ್ರದೇಶದಲ್ಲಿನ ಫ್ಯಾಕ್ಟರಿಯೊಂದರಲ್ಲಿ ಅನಿಲ ಸೋರಿಕೆಯಿಂದ ಭಾರಿ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ಕು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಳದ ಟ್ಯಾಂಕ್​ವೊಂದನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಶಕ್ತಿ ಸಿಂಗ್​ ಮಾಹಿತಿ ನೀಡಿದ್ದಾರೆ. ಆ ಟ್ಯಾಂಕ್​ನಿಂದ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಸಂಬಂಧಿಕರನ್ನು ಸಂಪರ್ಕಿಸಲಾಗುವುದು ಮತ್ತು ಈ ಕುರಿತು ದೂರು ದಾಖಲಾದರೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್​ ವರಿಷ್ಠಾಧಿಕಾರಿ ವಾಸೀಮ್​ ಅಕ್ರಮ ಹೇಳಿದ್ದಾರೆ.

ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ನಾಲ್ವರು ಕಾರ್ಮಿಕರು ಸಾವು.. ಇಬ್ಬರ ಸ್ಥಿತಿ ಗಂಭೀರ

ಇಂದು ಬೆಳಗ್ಗೆ ಆಂಧ್ರಪ್ರದೇಶದ ಬಟ್ಟೆ ಕಾರ್ಖಾನೆಯೊಂದರಲ್ಲಿ ವಿಷಾನೀಲ ಸೋರಿಕೆಯಿಂದಾಗಿ 50ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ..ಆಂಧ್ರದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: 150ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥ

ABOUT THE AUTHOR

...view details