ಕರ್ನಾಟಕ

karnataka

ETV Bharat / bharat

ಕಟ್ಟಡ ನಿರ್ಮಾಣ ಕಾರ್ಯ, ಟ್ರಕ್​ಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ ದೆಹಲಿ ಸರ್ಕಾರ - ದೆಹಲಿ ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟ ತಲುಪಿರುವ ಕಾರಣ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಮತ್ತಷ್ಟು ಬಿಗಿ ಕ್ರಮ ಕೈಗೊಂಡಿದೆ.

Pollution crisis in Delh
Pollution crisis in Delh

By

Published : Nov 29, 2021, 7:28 PM IST

ನವದೆಹಲಿ:ದೆಹಲಿಯಲ್ಲಿ ಉಂಟಾಗಿರುವ ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಡಿಸೆಂಬರ್​​​ 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಹಾಗೂ ಟ್ರಕ್​​ಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದೆ.

ದೆಹಲಿ ಪರಿಸರ ಸಂರಕ್ಷಣೆ ಖಾತೆ ಮಂತ್ರಿ ಗೋಪಾಲ್​ ರಾಯ್​ ಈ ನಿರ್ಧಾರ ಕೈಗೊಂಡಿದ್ದು, ಬರುವ ಡಿಸೆಂಬರ್​​​ 7ರವರೆಗ ಟ್ರಕ್​ಗಳ ಓಡಾಟದ ಮೇಲೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದ್ದು, ಅಗತ್ಯ ವಸ್ತುಗಳ ಟ್ರಕ್​ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಸಿಬ್ಬಂದಿಗಳಿಗೋಸ್ಕರ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಇದರ ಜೊತೆಗೆ, ಕಟ್ಟಡ ನಿರ್ಮಾಣ ಕಾರ್ಯ ಸಹ ಸ್ಥಗಿತಗೊಳ್ಳಲಿದೆ ಎಂದರು.

ಇದನ್ನೂ ಓದಿ:ಆಂಧ್ರಪ್ರದೇಶ: ಪೊಲೀಸರ ಮುಂದೆ ಶರಣಾದ ಮಾವೋವಾದಿ ನಾಯಕಿ

ದೆಹಲಿಯಲ್ಲಿ ವಾಯುಮಾಲಿನ್ಯ ಸಂಪೂರ್ಣವಾಗಿ ಹದಗೆಟ್ಟಿರುವ ಪರಿಣಾಮ ಕಳೆದ ವಾರ ಶಾಲಾ-ಕಾಲೇಜು​​ಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಜೊತೆಗೆ, ಸರ್ಕಾರಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡಲು ಸೂಚನೆ ನೀಡಲಾಗಿತ್ತು. ಇಷ್ಟಾದರೂ ದೆಹಲಿ-ಎನ್​​ಸಿಆರ್​​​ನ ವಾಯುಮಾಲಿನ್ಯ ಹತೋಟಿಗೆ ಬಾರದ ಕಾರಣ ಇದೀಗ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಂಡಿರುವ ಕಾರಣ ಅಲ್ಲಿ ಕೆಲಸ ಮಾಡುವ ಸಿಬ್ಬಂದಿ ತೊಂದರೆಗೊಳಗಾಗಿದ್ದು, ಜೀವನ ನಡೆಸಲು ರಾಜ್ಯ ಸರ್ಕಾರ 5 ಸಾವಿರ ರೂ. ಪರಿಹಾರ ನೀಡುವುದಾಗಿ ಈಗಾಗಲೇ ಘೋಷಣೆ ಮಾಡಿದೆ.

ABOUT THE AUTHOR

...view details