ಹೈದರಾಬಾದ್ :ವಿದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ತವರಿಗೆ ಕರೆತರುವ ಸರ್ಕಾರದ 'ವಂದೇ ಭಾರತ್ ಮಿಷನ್'ನ ಅಂಗವಾಗಿ 163 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನ ಶನಿವಾರ ರಾತ್ರಿ ಕುವೈತ್ನಿಂದ ಹೈದರಾಬಾದ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ರಾತ್ರಿ 10 ಗಂಟೆಗೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿದೆ. ವಿದೇಶದಿಂದ ಪ್ರಯಾಣಿಕರು ಆಗಮಿಸುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿತ್ತು. ಸ್ಯಾನಿಟೈಸಿಂಗ್ ಮೂಲಕ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗಿತ್ತು. ಪ್ರಯಾಣಿಕರು ವಿಮಾನವೇರುವ ಮುನ್ನವೇ ಸಂಪೂರ್ಣ ತಪಾಸಣೆ ನಡೆಸಿ, ಪ್ರಯಾಣಿಕರು ಸಾಮಾಜಿಕ ಅಂತರ ಅನುಸರಿಸಲು ಸೂಚನೆ ನೀಡಲಾಗಿತ್ತು.