ಕರ್ನಾಟಕ

karnataka

By

Published : Feb 20, 2020, 9:17 AM IST

ETV Bharat / bharat

ತಿಹಾರ್​ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡ ನಿರ್ಭಯಾ ಪ್ರಕರಣದ ಅಪರಾಧಿ ವಿನಯ್​

2012ರ ಡಿಸೆಂಬರ್​ನಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಲ್ಲೊಬ್ಬ ವಿನಯ್ ಜೈಲಿನ ಕೋಣೆಯ ಗೋಡೆಗೆ ತಲೆ ಚಚ್ಚಿಕೊಂಡು ಗಾಯಗೊಂಡಿದ್ದಾನೆ.

Vinay had attempted to hurt himself in Tihar Jai,ತಿಹಾರ್​ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡ ಆರೋಪಿ ವಿನಯ್​
ತಿಹಾರ್​ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡ ಆರೋಪಿ ವಿನಯ್​

ನವದೆಹಲಿ:ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ವಿನಯ್ ಜೈಲಿನ ಕೋಣೆಯ ಗೋಡೆಗೆ ತಲೆ ಚಚ್ಚಿಕೊಂಡು ಗಾಯಗೊಂಡಿದ್ದಾನೆ.

ಫೆಬ್ರವರಿ 16ರಂದು ವಿನಯ್​ ತಿಹಾರ್​ ಜೈಲಿನಲ್ಲಿ ತಾನಿದ್ದ ಕೋಣೆಯ ಗೋಡೆಗೆ ತಲೆ ಬಡಿದುಕೊಂಡು ಗಾಯಗೊಂಡಿದ್ದಾನೆ, ಆತನ ತಲೆಗೆ ಸಣ್ಣ ಗಾಯವಾಗಿದೆ ಎಂದು ತಿಹಾರ್​ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2012ರ ಡಿಸೆಂಬರ್​ನಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ಕೋರ್ಟ್‌ ತೀರ್ಪು ಹೊರಡಿಸಿತ್ತು. ನಂತರ ಫೆಬ್ರವರಿ 1ಕ್ಕೆ ಹೊಸ ದಿನಾಂಕ ನಿಗದಿಪಡಿಸಲಾಗಿತ್ತು.

ಇದಾದ ಬಳಿಕ ಫೆ.1ರಂದು ನಿಗದಿಯಾಗಿದ್ದ ಗಲ್ಲು ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಫೆ.17ರಂದು ಪಟಿಯಾಲ ಹೌಸ್​ ಕೋರ್ಟ್​, ಮಾರ್ಚ್​ 3ಕ್ಕೆ ಹೊಸದಾಗಿ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ.

ABOUT THE AUTHOR

...view details