ಹೊಸದಿಲ್ಲಿ: ಇರಾನ್ನ ಕೋಮ್ನಲ್ಲಿ ಸಿಲುಕಿರುವ ಎಲ್ಲ 250 ಭಾರತೀಯ ಯಾತ್ರಿಕರಿಗೆ ಕೋವಿಡ್-19 ಸೋಂಕು ತಗುಲಿದೆ ಹಾಗೂ ಅವರನ್ನು ಮರಳಿ ಕರೆತರಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಬುಧವಾರ ತಿಳಿಸಿದೆ.
ಇರಾನ್ನಲ್ಲಿ ಸಿಲುಕಿರುವ ಭಾರತೀಯರ ಆರೋಗ್ಯದ ಬಗ್ಗೆ ನಿಗಾವಹಿಸಲು ಹಾಗೂ ಅವರೊಂದಿಗೆ ಸದಾ ಸಂಪರ್ಕದಲ್ಲಿರುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇರಿಗೆ ನಿರ್ದೇಶನ ನೀಡಲು ಚಿಂತಿಸುತ್ತಿರುವುದಾಗಿ ಸುಪ್ರೀಂಕೋರ್ಟ್ ಇದೇ ಸಂದರ್ಭದಲ್ಲಿ ಹೇಳಿದೆ.
ನ್ಯಾ. ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಹಾ ಅವರ ಪೀಠ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಕೇಂದ್ರ ಸರಕಾರ ಗಂಭಿರವಾಗಿ ವರ್ತಿಸುತ್ತಿದೆ ಎಂಬುದು ನಮಗೆ ಮನವರಿಕೆಯಾಗಿದೆ ಎಂದು ಹೇಳಿತು.