ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಸುಮಾರು ನಾಲ್ಕು ಕೋಟಿ ವಲಸಿಗರು ಹಲವು ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲಾಕ್ಡೌನ್ ಘೋಷಣೆಯ ನಂತರ ಈವರೆಗೆ 75 ಲಕ್ಷ ಜನರು ರೈಲು ಮತ್ತು ಬಸ್ಗಳ ಮೂಲಕ ತಮ್ಮ ಊರು ಸೇರಿದ್ದಾರೆ ಎಂದು ಗೃಹ ಇಲಾಖೆ ತಿಳಿಸಿದೆ.
ವಲಸೆ ಕಾರ್ಮಿಕರ ವಿಚಾರ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ, ದೇಶದ ವಿವಿಧ ಭಾಗಗಳಿಂದ ವಲಸೆ ಕಾರ್ಮಿಕರನ್ನು ತಮ್ಮ ಸ್ಥಳಗಳಿಗೆ ಸಾಗಿಸಲು ರೈಲ್ವೆ ಇಲಾಖೆ ಮೇ 1 ರಿಂದ 2,600 ಕ್ಕೂ ಹೆಚ್ಚು ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಿದೆ ಎಂದಿದ್ದಾರೆ.