ಕರ್ನಾಟಕ

karnataka

ETV Bharat / bharat

ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ವೇಳೆ ಪೌರ ಕಾರ್ಮಿಕ ದುರ್ಮರಣ

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸರ್ಕಾರಿ ಇಲಾಖೆಗಳು ನಿರಂತರವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಉತ್ತರ ಪ್ರದೇಶದಲ್ಲಿ ಸೋಂಕು ನಿವಾರಕ ಸಿಂಪಡಣೆ ವೇಳೆ ಪೌರಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

By

Published : Apr 11, 2020, 11:59 AM IST

40-yr-old man on municipality duty dies
40-yr-old man on municipality duty dies

ಹರ್ದೋಯಿ (ಉತ್ತರ ಪ್ರದೇಶ): ಕೊರೊನಾ ವಿರುದ್ಧದ ಹೋರಾಟದಲ್ಲಿ ಪೌರ ಕಾರ್ಮಿಕರು ರಜೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ನಗರದಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ವೇಳೆ 40 ವರ್ಷದ ಸಿಬ್ಬಂದಿ ಸಾವನ್ನಪ್ಪಿದ ದುರ್ಘಟನೆ ವರದಿಯಾಗಿದೆ.

ರಾಜೇಶ್​ ಕುಮಾರ್​​ ಎಂಬವರು ಇಲ್ಲಿನ ಲಕ್ಷ್ಮೀ ಪೂರ್ವ ಪ್ರದೇಶದಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡುತ್ತಿದ್ದರು. ಈ ವೇಳೆ ಅವರು ಏಕಾಏಕಿ ಕುಸಿದು ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಿಂದ ನೊಂದ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದು ಪಾಲಿಕೆ ಮುಖಗವಸು ನೀಡದ ಕಾರಣ ಸಾವು ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪರಿಹಾರವಾಗಿ 50 ಲಕ್ಷ ರೂ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ABOUT THE AUTHOR

...view details