ಕರ್ನಾಟಕ

karnataka

ETV Bharat / bharat

ಕಾಶ್ಮೀರದಲ್ಲಿನ ಎನ್​ಕೌಂಟರ್​ಗೆ 6 ಉಗ್ರರು ಬಲಿ: ಓರ್ವ ಸೈನಿಕ ಹುತಾತ್ಮ - ಉಗ್ರರು ಸಾವು

ಕಣಿವೆ ರಾಜ್ಯದ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್​ಕೌಂಟರ್​ನಲ್ಲಿ ಭಾರತೀಯ ಸೇನಾಪಡೆಯ ಯೋಧರು ಆರು ಮಂದಿ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉತ್ತರ ಕಾಶ್ಮೀರದ ಗ್ಯಾಂಡರ್‍ಬಾಲ್ ಜಿಲ್ಲೆಯ ನಾರನಾಗ್ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರು ಮತ್ತು ರಾಂಬನ್ ಜಿಲ್ಲೆಯ ಥಾರ್ ಗ್ರಾಮದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ 3 ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ಸಾವಿಗೀಡಾದ ಭಯೋತ್ಪಾದಕರು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದವರು ಎನ್ನಲಾಗುತ್ತಿದೆ.

indian army

By

Published : Sep 29, 2019, 5:31 AM IST

ಜಮ್ಮು/ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದಲ್ಲಿನ ಎರಡು ಪ್ರತ್ಯೇಕ ಎನ್​ಕೌಂಟರ್​ನಲ್ಲಿ ಭಾರತೀಯ ಸೇನಾಪಡೆಯ ಯೋಧರು ಆರು ಮಂದಿ ಉಗ್ರರಕನ್ನು ಹೊಡೆದುರುಳಿಸಿದ್ದಾರೆ. ಜೊತೆಗೆ ಓರ್ವ ಯೋಧ ಹುತಾತ್ಮನಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

ಗ್ಯಾಂಡರ್ಬಾಲ್ ಜಿಲ್ಲೆಯ ನಾರನಾಗ್ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಗುರೆಜ್ ವ್ಯಾಪ್ತಿಯ ಗಡಿ ನಿಯಂತ್ರಣ ರೇಖೆಯಿಂದ (ಎಲ್‌ಒಸಿ) ಭಾರತದ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದರು. ಅಲ್ಲದೆ, ಭಯೋತ್ಪಾದಕರ ಒಳನುಸುಳುವಿಕೆಗೆ ಅನುಕೂಲವಾಗುವ ಉದ್ದೇಶದಿಂದ ಪಾಕಿಸ್ತಾನ ಸೇನೆಯು ಕಳೆದ ಮೂರು ದಿನಗಳಿಂದ ಗುರೆಜ್ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ರಾಂಬನ್ ಜಿಲ್ಲೆಯ ಥಾರ್ ಗ್ರಾಮದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಸೇನೆಯು ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಈ ಉಗ್ರರು ಮನೆಯೊಂದಕ್ಕೆ ನುಗ್ಗಿ ಅಲ್ಲಿಂದ ಕೈದಿಗಳನ್ನು ಒತ್ತೆಯಾಳುಗಳಾಗಿ ಕರೆದೊಯ್ದಿದ್ದರು ಎನ್ನಲಾಗುತ್ತಿದೆ. ಉಗ್ರರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದವರಾಗಿದ್ದು, ಶಸ್ತ್ರಾಸ್ತ್ರ, ಮದ್ದು, ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details