ಲಲಿತ್ಪುರ (ಉತ್ತರಪ್ರದೇಶ): 65 ವರ್ಷದ ದಲಿತ ವ್ಯಕ್ತಿಗೆ ಥಳಿಸಿ, ಮೂತ್ರ ಕುಡಿಯುವಂತೆ ಒತ್ತಾಯಿಸಿರುವ ಅಮಾನವೀಯ ಘಟನೆ ಲಲಿತ್ಪುರದಲ್ಲಿ ನಡೆದಿದೆ.
ಸೋನು ಯಾದವ್ ಎಂಬಾತ ಅಮರ್ ಎಂಬ ವ್ಯಕ್ತಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದು, ನಿರಾಕರಿಸಿದಾಗ ದೊಣ್ಣೆಯಿಂದ ಥಳಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಶ್ನಿಸಲು ಹೋದ ವೃದ್ಧನ ಮಗನಿಗೂ ಕೊಡಲಿಯಿಂದ ಹಲ್ಲೆ ನಡೆಸಿದ್ದು, ಈ ಸಂಬಂಧ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ.