ನವದೆಹಲಿ:ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಬ್ಬರು ಮನರೋಗಿ ಎಂದು ಹೇಳುವ ಮೂಲಕ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಯೋಗಿ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೋರೋಗಿಯಾಗಿದ್ದಾರೆ. ಅವರು ಬಂದರೆ ನಾನು ಉಚಿತ ಚಿಕಿತ್ಸೆ ಕೊಡಿಸುವೆ ಎಂದಿದ್ದಾರೆ.
ಕೇಜ್ರಿವಾಲ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬುದಕ್ಕೆ ಸಾಕ್ಷಿ ನೀಡಲಿ, ಇಲ್ಲ ತಪ್ಪು ಹೇಳಿಕೆ ನೀಡಿರುವುದಕ್ಕೆ ಜೈಲಿಗೆ ಹೋಗಬೇಕು. ಕೇಜ್ರಿವಾಲ್ ಭಯೋತ್ಪಾದಕ ಹಾಗೂ ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಯಾರು ಹೇಳುತ್ತಾರೋ ಅವರು ನಾಟಕ ಕಂಪನಿಯನ್ನು ಮಾಡಿದ್ದಾರೆ ಎಂದು ಎಎಪಿಯ ರಾಷ್ಟ್ರೀಯ ವಕ್ತಾರರು ಹೇಳಿದ್ದಾರೆ.