ನವದೆಹಲಿ: ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದರು.
ಸೋನಿಯಾರ ನಿವಾಸದಲ್ಲಿ ಭೇಟಿಯಾದ ರಾಜ್ ಠಾಕ್ರೆ, ಚುನಾವಣೆಗಾಗಿ ಕಾಂಗ್ರೆಸ್ ಜತೆ ಕೈ ಜೋಡಿಸುವ ಸಂಬಂಧ ಚರ್ಚೆ ನಡೆಸಿದರು ಎನ್ನಲಾಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ ಠಾಕ್ರೆ ಪಕ್ಷ ನೇರವಾಗಿ ಸ್ಪರ್ಧಿಸದಿದ್ದರೂ, ಮೋದಿ ಸರ್ಕಾರದ ಟೀಕಾ ಪ್ರಹಾರ ನಡೆಸಿದ್ದರು. ಮೋದಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಬಿಚ್ಚಿಡುತ್ತಾ, ಭಾರಿ ಪ್ರಚಾರಾಂದೋಲನ ನಡೆಸಿದ್ದರು.