ಕರ್ನಾಟಕ

karnataka

By

Published : Aug 8, 2020, 2:00 PM IST

ETV Bharat / bharat

ರಾಂಚಿಯಲ್ಲಿ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ

ರಾಂಚಿಯಿಂದ ಮುಂಬೈಗೆ ಹೊರಟಿದ್ದ ಏರ್ ಏಷ್ಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಪೈಲಟ್​​ ತುರ್ತು ಲ್ಯಾಂಡಿಂಗ್​ ಮಾಡಿದ್ದಾರೆ.

emergency landing at birsa munda airport ranchi
ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ

ರಾಂಚಿ (ಜಾರ್ಖಂಡ್): ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ರಾಂಚಿಯಿಂದ ಮುಂಬೈಗೆ ಹೊರಡಲು ಟೇಕ್​ ಆಫ್​ ಆಗುತ್ತಿದ್ದ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಈ ಹಿನ್ನೆಲೆ ಪೈಲಟ್​​ ನಿಲ್ದಾಣದಲ್ಲೇ ತುರ್ತು ಲ್ಯಾಂಡಿಂಗ್​ ಮಾಡಿದ್ದಾರೆ.

ಈ ಸಂಬಂಧ ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿರುವ ಬಿರ್ಸಾ ಮುಂಡಾ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿನೋದ್ ಶರ್ಮಾ, ಈ ವಿಮಾನದಲ್ಲಿ 176 ಪ್ರಯಾಣಿಕರಿದ್ದರು. ಪ್ರಸ್ತುತ ಎಂಜಿನ್ ಅನ್ನು ಪರೀಕ್ಷಿಸಲಾಗುತ್ತಿದ್ದು, ಅಲ್ಪಾವಧಿಯಲ್ಲಿಯೇ ಮುಂಬೈಗೆ ಹಾರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details