ಕರ್ನಾಟಕ

karnataka

By

Published : Jun 3, 2020, 6:32 PM IST

ETV Bharat / bharat

69,000 ಶಿಕ್ಷಕರ ನೇಮಕ ಪ್ರಕ್ರಿಯೆ ತಡೆಹಿಡಿದ ಅಲಹಾಬಾದ್ ಹೈಕೋರ್ಟ್

69,000 ಸಹಾಯಕ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ನ್ಯಾಯಪೀಠ ತಡೆಹಿಡಿದಿದೆ. ಉತ್ತರ ಪತ್ರಿಕೆಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಒಂದು ವಾರದೊಳಗೆ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ನ್ಯಾಯಾಲಯ ಅರ್ಜಿದಾರರಿಗೆ ನಿರ್ದೇಶನ ನೀಡಿದೆ.

allahabad hc
allahabad hc

ಲಖನೌ (ಉತ್ತರ ಪ್ರದೇಶ): ಇಲ್ಲಿನ 69,000 ಸಹಾಯಕ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ನ್ಯಾಯಪೀಠ ತಡೆಹಿಡಿದಿದೆ.

ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಜುಲೈ 12 ದಿನಾಂಕವನ್ನು ನಿಗದಿಪಡಿಸಿದೆ. ನ್ಯಾಯಮೂರ್ತಿ ಅಲೋಕ್ ಮಾಥುರ್ ಈ ಆದೇಶ ನೀಡಿದ್ದಾರೆ.

ಉತ್ತರ ಪತ್ರಿಕೆಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಒಂದು ವಾರದೊಳಗೆ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ನ್ಯಾಯಾಲಯ ಅರ್ಜಿದಾರರಿಗೆ ನಿರ್ದೇಶನ ನೀಡಿದೆ.

ಪ್ರಾಥಮಿಕ ಶಿಕ್ಷಣ ಇಲಾಖೆ 69,000 ಸಹಾಯಕ ಶಿಕ್ಷಕರ ನೇಮಕಾತಿ ಫಲಿತಾಂಶವನ್ನು ಘೋಷಿಸಿತ್ತು.

ABOUT THE AUTHOR

...view details