ಕರ್ನಾಟಕ

karnataka

ಆಂಧ್ರ ಸರ್ಕಾರ ಕೊರೊನಾ ಬಿಕ್ಕಟ್ಟನ್ನು ರಾಜಕೀಯಗೊಳಿಸುತ್ತಿದೆ: ಪವನ್ ಕಲ್ಯಾಣ್ ಆರೋಪ

By

Published : Apr 18, 2020, 2:12 PM IST

ಕೊರೊನಾ ಪರಿಸ್ಥಿತಿ ಮತ್ತು ತಮ್ಮ ಪಕ್ಷದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜನಸೇನಾ ಪಕ್ಷದ (ಜೆಎಸ್‌ಪಿ) ಅಧ್ಯಕ್ಷ ಪವನ್ ಕಲ್ಯಾಣ್ ಪಕ್ಷದ ಮುಖಂಡರು ಮತ್ತು ಮಹಿಳಾ ವಿಭಾಗದ ಸದಸ್ಯರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

Breaking News

ಹೈದರಾಬಾದ್: ಕೊರೊನಾ ಪರಿಸ್ಥಿತಿಯನ್ನು ಆಂಧ್ರ ಪ್ರದೇಶ ಸರ್ಕಾರ ರಾಜಕೀಯಗೊಳಿಸುತ್ತಿದೆ ಎಂದು ಜನಸೇನಾ ಪಕ್ಷದ (ಜೆಎಸ್‌ಪಿ) ಅಧ್ಯಕ್ಷ ಪವನ್ ಕಲ್ಯಾಣ್ ಆರೋಪಿಸಿದ್ದಾರೆ.

ಪಕ್ಷದ ಮುಖಂಡರು ಮತ್ತು ಮಹಿಳಾ ವಿಭಾಗದ ಸದಸ್ಯರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದ ಕಲ್ಯಾಣ್, ಈ ದುರಂತ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸರ್ಕಾರ ಎಡವಿದೆ. ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಲ್ಲ. ಈ ಸಂದರ್ಭವನ್ನು ರಾಜಕೀಯಗೊಳಿಸಬಾರದು ಎಂದು ನಾವು ಆರಂಭದಿಂದಲೂ ಸರ್ಕಾರಕ್ಕೆ ಹೇಳುತ್ತಿದ್ದೇವೆ. ಸರ್ಕಾರ ಇದನ್ನು ಜನರ ವೈಯುಕ್ತಿಕ ಸಮಸ್ಯೆ ಎಂದು ಭಾವಿಸಬಾರದು ಎಂದಿದ್ದಾರೆ.

ಪ್ರಸ್ತುತ ಕೊರೊನಾ ಪರಿಸ್ಥಿತಿ, ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಮತ್ತು ಲಾಕ್​ಡೌನ್​ನಿಂದ ಸಣ್ಣ ವ್ಯಾಪಾರಿಗಳು ಮತ್ತು ಕೂಲಿ ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪಕ್ಷದ ಮುಖಂಡರೊಂದಿಗೆ ಕಲ್ಯಾಣ್ ಚರ್ಚಿಸಿದರು. ಅಲ್ಲದೆ, ತಮ್ಮ ಪಕ್ಷದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶೀಘ್ರದಲ್ಲಿ ತಿಳಿಸುವುದಾಗಿ ಹೇಳಿದರು.

ABOUT THE AUTHOR

...view details