ಕರ್ನಾಟಕ

karnataka

By

Published : Aug 14, 2020, 2:10 PM IST

Updated : Aug 14, 2020, 3:24 PM IST

ETV Bharat / bharat

ವಿಡಿಯೋ: ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ!

ಆಸ್ತಿ ವಿಚಾರಕ್ಕೆ ಜಗಳ ನಡೆದು ತಂದೆಯೇ ಮಗನನ್ನು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಂದಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

Man brutally murders son
ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ

ವಿಶಾಖಪಟ್ಟಣಂ:ಆಸ್ತಿ ವಿಚಾರದಲ್ಲಿ ವಾಗ್ವಾದ ನಡೆದು ವ್ಯಕ್ತಿಯೊಬ್ಬ ತನ್ನ 40 ವರ್ಷದ ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಂದ ಘಟನೆ ನಗರದ ಪೆಂಡೂರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿನಮುಶಿಡಿವಾಡ ಬಳಿಯ ಸತ್ಯನಗರದಲ್ಲಿ ನಡೆದಿದೆ.

ತಂದೆ ವೀರರಾಜು ಮಗ ಜಲರಾಜುನನ್ನು ಕೊಲೆ ಮಾಡಿದ್ದಾನೆ. ಮುಂಬೈನಲ್ಲಿ ಸಿಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದ ಜಲರಾಜು ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದ. ಈ ವೇಳೆ ಆಸ್ತಿ ವಿಚಾರದಲ್ಲಿ ಜಗಳ ನಡೆದು ತಂದೆ ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ.

ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ

ಘಟನೆ ಬಳಿಕ ಆರೋಪಿ ವೀರರಾಜು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಐಪಿಸಿ ಸೆಕ್ಷನ್ 302ರಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Last Updated : Aug 14, 2020, 3:24 PM IST

ABOUT THE AUTHOR

...view details