ನವದೆಹಲಿ :ಅಗತ್ಯವಿದ್ದಲ್ಲಿ ಗಡಿಯುದ್ದಕ್ಕೂ ಭಯೋತ್ಪಾದಕ ಗುರಿಗಳನ್ನು ಹೊಡೆಯುವ ಸಾಮರ್ಥ್ಯ ಭಾರತಕ್ಕೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನವು ಕೆಲವು ತಿಂಗಳುಗಳಲ್ಲಿ 300-400 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಆದರೆ, ಭಾರತೀಯ ಸೇನೆಯು ಸೂಕ್ತ ಉತ್ತರವನ್ನು ನೀಡುತ್ತಿರುತ್ತದೆ ಎಂದಿದ್ದಾರೆ. "ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಸೈನ್ಯವು ಕಾರ್ಯನಿರ್ವಹಿಸುತ್ತಿದೆ. ದೇಶದ ಸೈನಿಕರು ಈ ಕಡೆ ಮಾತ್ರವಲ್ಲ, ಅಗತ್ಯವಿದ್ದರೆ ಇನ್ನೊಂದು ಬದಿಗೆ ಹೋಗಿ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಬಹುದು.