ಶ್ರೀನಗರ : ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಅಪ್ರಚೋದಿತ ದಾಳಿ ನಡೆಸೋದನ್ನ ಇನ್ನೂ ನಿಲ್ಲಿಸಿಲ್ಲ. ಇವತ್ತೂ ಕೂಡ ಪಾಕ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕ್ನಿಂದ ಅಪ್ರಚೋದಿತ ದಾಳಿ : ಭಾರತೀಯ ಯೋಧ ಹುತಾತ್ಮ
ಅಂತಾರಾಷ್ಟ್ರೀಯ ಗಡಿರೇಖೆಯಲ್ಲಿ ಮತ್ತೆ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆೆಸಿದೆ. ಇದರಿಂದಾಗಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಪೂಂಚ್ ಭಾಗದ ಕೆರ್ನಿ ಹಾಗೂ ಶಾಹಪುರ ಭಾಗದಲ್ಲಿ ನಿನ್ನೆ ಸಂಜೆ5:30ರಿಂದಲೂ ಪಾಕ್ ಕಡೆಯಿಂದ ಗುಂಡಿನ ದಾಳಿ ನಡೆಯುತ್ತಿದೆ. ರಾತ್ರಿಯಿಡೀ ದಾಳಿ ಮುಂದುವರೆದಿದ್ದು, ಭಾರತೀಯ ಸೇನೆ ಸಹ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಆದರೆ, ಪಾಕ್ ಕಡೆಗೆ ಇದರಿಂದ ಆಗಿರುವ ನಷ್ಟದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.
ಪಾಕ್ ದಾಳಿಯಲ್ಲಿ ಯೋಧನಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಮಿಲಿಟರಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಹುತಾತ್ಮರಾದರು ಎಂದು ತಿಳಿದುಬಂದಿದೆ.ಕಳೆದ ಗುರುವಾರವಷ್ಟೇ ರಾಜೌರಿ ಜಿಲ್ಲೆಯ ಸುಂದರ್ ಬನಿ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆಯ ಅಪ್ರಚೋದಿತ ದಾಳಿಗೆ 24 ವರ್ಷದ ಯೋಧ ಯಶ್ ಪೌಲ್ ಹುತಾತ್ಮರಾಗಿದ್ದರು.