ಮಧ್ಯಪ್ರದೇಶ:ವಿಷಾಹಾರ ಸೇವಿಸಿ ಮಧ್ಯಪ್ರದೇಶದ ಬೆತುಲ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ.
ವಿಷಾಹಾರ ಸೇವಿಸಿ ಮಹಾರಾಷ್ಟ್ರದ ನಾಗ್ಪುರದ ಆಸ್ಪತ್ರೆಯಲ್ಲಿ ಬೆತುಲ್ನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಹೇಂದ್ರ ತ್ರಿಪಾಠಿ ಹಾಗೂ ಅವರ ಮಗ ಅಭಿಯಾನ ರಾಜ್ (33) ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮಗ ಮತ್ತು ಇಂದು ಬೆಳಗ್ಗೆ ತಂದೆ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರದ್ಧಾ ಜೋಶಿ ತಿಳಿಸಿದ್ದಾರೆ.