ಭಾಗಲ್ಪುರ್(ಬಿಹಾರ):ಬಿಹಾರದಲ್ಲಿ ಚುನಾವಣಾ ಅಖಾಡಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ, ಭಾಗಲ್ಪುರ್ದಲ್ಲಿ ಮೂರನೇ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದರು. ಈ ವೇಳೆ ಬಿಹಾರದ ಜನರು ನಿತೀಶ್ ಕುಮಾರ್ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ ಎಂದು ಹೇಳಿದರು.
ಬೆಳಗ್ಗೆ ಸಸರಾಮ್ ಹಾಗೂ ಗಯಾದಲ್ಲಿ ಪ್ರಚಾರ ಸಭೆ ನಡೆಸಿದ ಬಳಿಕ ಭಾಗಲ್ಫುರ್ದಲ್ಲಿನ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು(ಎನ್ಡಿಎ) ರಾಜ್ಯದಲ್ಲಿ ಮರು ಆಯ್ಕೆ ಮಾಡಲು ಬಿಹಾರದ ಜನರು ನಿರ್ಧರಿಸಿದ್ದಾರೆ ಎಂದರು.
ಇದು ಇಂದು ನನ್ನ ಮೂರನೇ ರ್ಯಾಲಿ. ಬಿಹಾರ ಜನರ ಆದೇಶವು ನಿತೀಶ್ ಕುಮಾರ್ಜೀ ಅವರ ನೇತೃತ್ವದ ಎನ್ಡಿಎ ಸರ್ಕಾರದೊಂದಿಗೆ ಸ್ಪಷ್ಟವಾಗಿದೆ. ನಾನು ಹೋದಲ್ಲೆಲ್ಲಾ ಬಿಹಾರ ಜನರು ನಿತೀಶ್ಜೀ ಅವರನ್ನು ಮರು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ. ಬಿಹಾರದ ಅಭಿವೃದ್ಧಿ ವೇಗ ಮತ್ತಷ್ಟು ಹೆಚ್ಚಾಗಲು ಎನ್ಡಿಎ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮತದಾರರಲ್ಲಿ ಮನವಿ ಮಾಡಿದರು.