ಕರ್ನಾಟಕ

karnataka

By

Published : Jul 13, 2019, 12:22 PM IST

ETV Bharat / bharat

ಗಾಂಧೀಜಿ 150ನೇ ಜನ್ಮ ದಿನಾಚರಣೆ: ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡ ಹೇಮಾಮಾಲಿನಿ

ಮಹಾತ್ಮ ಗಾಂಧೀಜಿ 150 ನೇ ಜನ್ಮ ದಿನಾಚರಣೆ ನಿಮಿತ್ತ ಸಂಸತ್​ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನದಲ್ಲಿ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಕೂರ್, ಬಿಜೆಪಿ ಸಂಸದೆ ಹೇಮಾ ಮಾಲಿನಿ ಸೇರಿದಂತೆ ಬಿಜೆಪಿ ಸಂಸದರು ಭಾಗವಹಿಸಿ ತಮ್ಮ ಅನುಭವ ಹಂಚಿಕೊಂಡರು.

ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾದ ಬಿಜೆಪಿ ನಾಯಕರು

ನವ ದೆಹಲಿ: ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ನಿಮಿತ್ತ ಸಂಸತ್ತಿನ ಆವರಣದಲ್ಲಿ ನಡೆದ ಸ್ವಚ್ಛ ಭಾರತ ಅಭಿಯಾನದಲ್ಲಿ ಬಿಜೆಪಿ ನಾಯಕರು ಸಂಸದರು ಕೈಜೋಡಿಸಿದರು.

ಹೌದು ಸಂಸತ್ತಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನದಲ್ಲಿ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಕೂರ್, ಬಿಜೆಪಿ ಸಂಸದೆ ಹೇಮಾ ಮಾಲಿನಿ ಸೇರಿದಂತೆ ಬಿಜೆಪಿ ಸಂಸದರು ಭಾಗವಹಿಸಿ ತಮ್ಮ ಅನುಭವ ಹಂಚಿಕೊಂಡರು.

ಇನ್ನೂ ಈ ಕುರಿತು ಮಾತನಾಡಿದ ಸಂಸದೆ ಹೇಮ ಮಾಲಿನಿ, ಸದನದ ಸ್ಪೀಕರ್ ಗಾಂಧಿಯವರ 150 ನೇ ಜನ್ಮ ದಿನಾಚರಣೆ ನಿಮಿತ್ತ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ. ನಾನು ಮುಂದಿನ ವಾರ ಮಥುರಾಕ್ಕೆ ಹಿಂತಿರುಗುತ್ತಿದ್ದು, ಅಲ್ಲಿಯೂ ಈ ಅಭಿಯಾನ ಮಾಡುತ್ತೇನೆ ಎಂದರು.

For All Latest Updates

TAGGED:

ABOUT THE AUTHOR

...view details