ಭೋಂಗಿರ್(ತೆಲಂಗಾಣ): 8 ನೇ ತರಗತಿ ಓದುತ್ತಿದ್ದ 13 ವರ್ಷದ ಬಾಲಕನೊಬ್ಬ ರಾಮಣ್ಣಾಪೇಟ್ನ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬಾಲಕನ ಶಾಲೆಯಲ್ಲಿ ತರಗತಿ ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಬಾಲಕ ಸೋತಿದ್ದನಂತೆ. ಇದರಿಂದ ನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕನ ಶವವು ರಾಮಣ್ಣಾಪೇಟ್ನ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.