ಸುಲ್ತಾನ್ಪುರ (ಉತ್ತರ ಪ್ರದೇಶ): ಯುವಕನೊಬ್ಬ ತನ್ನ ಪ್ರಿಯತಮೆಯ ತಂದೆ-ತಾಯಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಘಟನೆ ನಡೆದಿದೆ.
ಪ್ರಿಯತಮೆಯ ಭೇಟಿಗೆ ವಿರೋಧ... ಲವರ್ ಪೋಷಕರನ್ನೇ ಕೊಂದ ಯುವಕ!
ಪ್ರಿಯತಮೆಯನ್ನು ಭೇಟಿಯಾಗಲು ವಿರೋಧವೊಡ್ಡಿದಕ್ಕೆ ಆಕೆಯ ಪೋಷಕರನ್ನೇ ಯುವಕನೊಬ್ಬ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸುಲ್ತಾನ್ಪುರ ಜಿಲ್ಲೆಯಲ್ಲಿ ನಡೆದಿದೆ.
ಪ್ರಿಯತಮೆಯ ಹೆತ್ತವರನ್ನು ಹತ್ಯೆ ಮಾಡಿದ ಯುವಕ
ಸುಲ್ತಾನ್ಪುರ ಜಿಲ್ಲೆಯ ಗೋಸೈಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಲಾಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು ಭೇಟಿಯಾಗಲು ಆಕೆಯ ಹೆತ್ತವರು ವಿರೋಧ ವ್ಯಕ್ತಪಡಿಸಿದ್ದೇ ಹತ್ಯೆಗೆ ಕಾರಣವೆಂದು ಹೇಳಲಾಗ್ತಿದೆ.
ಘಟನೆಯ ಮಾಹಿತಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಹರಿ ಮೀನಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯದ ಬಳಿಕ ಆರೋಪಿ ಯುವಕ ಪರಾರಿಯಾಗಿದ್ದಾನೆ.