ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಕುರಿತು ವರದಿಯಾಗಿದೆ.
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಎಸ್ಎಫ್ ಯೋಧ - ಗಡಿ ಭದ್ರತಾ ಪಡೆ
ಖಿನ್ನತೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಯೋಧನೊಬ್ಬ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
![ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಎಸ್ಎಫ್ ಯೋಧ ಆತ್ಮಹತ್ಯೆಗೆ ಶರಣಾದ ಬಿಎಸ್ಎಫ್ ಯೋಧ](https://etvbharatimages.akamaized.net/etvbharat/prod-images/768-512-8504110-125-8504110-1598004189654.jpg)
ಆತ್ಮಹತ್ಯೆಗೆ ಶರಣಾದ ಬಿಎಸ್ಎಫ್ ಯೋಧ
169ನೇ ಬೆಟಾಲಿಯನ್ನ ಹೆಡ್ ಕಾನ್ಸ್ಟೆಬಲ್ ರಾಮ್ ಕುಮಾರ್, ತನ್ನ ಸೇವಾ ರೈಫಲ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರಾದ ಬ್ರಾನ್ವಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಯೋಧ ತೀವ್ರ ಖಿನ್ನತೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.