ನವದೆಹಲಿ:ಬಜೆಟ್ ಅಧಿವೇಶನದ ದ್ವಿತೀಯಾರ್ಧ ಕಲಾಪ ಇಂದಿನಿಂದ ಆರಂಭವಾಗಿದೆ. ದೆಹಲಿ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಮಧ್ಯಾಹ್ನ ಲೋಕಸಭೆಯಲ್ಲಿ ದೆಹಲಿ ಗಲಭೆ ಕುರಿತು ಚರ್ಚಿಸಲು ಕಾಂಗ್ರೆಸ್ ನೋಟಿಸ್ ನೀಡಿದೆ. ದೆಹಲಿಯಲ್ಲಿನ ಗಲಭೆಗಳ ಬಗ್ಗೆ ಚರ್ಚಿಸಲು ಸದನದ ಎಲ್ಲಾ ವ್ಯವಹಾರಗಳನ್ನು ಸ್ಥಗಿತಗೊಳಿಸುವಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋಟಿಸ್ ನೀಡಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ನಿಯಮಗಳ ಪ್ರಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು.