ಕರ್ನಾಟಕ

karnataka

ETV Bharat / bharat

ಬಿಜೆಪಿ ಪೌರತ್ವ ದಾಖಲೆ ಹೆಸರಲ್ಲಿ ದೇಶವನ್ನು ಒಡೆದು ಆಳುತ್ತಿದೆ: ದಿಗ್ವಿಜಯ ಸಿಂಗ್ ಟೀಕೆ - ಸಿಎಎ ವಿರುದ್ಧ ದಿಗ್ವಿಜಯ ಸಿಂಗ್​ ಹೇಳಿಕೆ

ಕೇಂದ್ರ ಸರ್ಕಾರದ ಒಡೆದು ಆಳುವ ನೀತಿಯನ್ನು ವಿರೋಧಿಸುತ್ತೇವೆ. ಇಲ್ಲಿ ಬದುಕಲು ಇಷ್ಟಪಡುವ ಜನರಲ್ಲಿ ಪೌರತ್ವದ ದಾಖಲೆಗಳನ್ನು ಕೇಳುವ ಹಕ್ಕು ಯಾರಿಗೂ ಇಲ್ಲ ಎಂದು ನವದೆಹಲಿಯ ಶಹೀನ್​ ಬಾಗ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಪ್ರತಿಭಟನೆ ಉದ್ದೇಶಿಸಿ ಕಾಂಗ್ರೆಸ್​ ನಾಯಕ ದಿಗ್ವಿಜಯ್ ಸಿಂಗ್​ ಬಿಜೆಪಿ ವಿರುದ್ಧ ಕಟುವಾಗಿ ಮಾತನಾಡಿದ್ದಾರೆ.

CAA, NRC and NPR against Constitution: Digvijaya Singh
ಕಾಂಗ್ರೆಸ್​ ನಾಯಕ ದಿಗ್ವಿಜಯ ಸಿಂಗ್

By

Published : Jan 21, 2020, 9:46 AM IST

ನವದೆಹಲಿ:ಕೇಂದ್ರ ಸರ್ಕಾರದ ಒಡೆದು ಆಳುವ ನೀತಿಯನ್ನು ವಿರೋಧಿಸುತ್ತೇವೆ. ಇಲ್ಲಿ ಬದುಕಲು ಇಷ್ಟಪಡುವ ಜನರಲ್ಲಿ ಪೌರತ್ವದ ದಾಖಲೆಗಳನ್ನು ಕೇಳುವ ಹಕ್ಕು ಯಾರಿಗೂ ಇಲ್ಲ ಎಂದು ಕಾಂಗ್ರೆಸ್​ ನಾಯಕ ದಿಗ್ವಿಜಯ್ ಸಿಂಗ್​ ಬಿಜೆಪಿ ವಿರುದ್ಧ ಕಟುವಾಗಿ ಮಾತನಾಡಿದ್ದಾರೆ.

ಕಾಂಗ್ರೆಸ್​ ನಾಯಕ ದಿಗ್ವಿಜಯ ಸಿಂಗ್

ಶಹೀನ್ ಭಾಗ್​ನಲ್ಲಿ ಕಳೆದೊಂದು ತಿಂಗಳಿನಿಂದ ಎನ್​ಆರ್​ಸಿ, ಸಿಎಎ, ಎನ್​​ಪಿಆರ್​ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಾಗೂ ಜಾರಿಗೊಳಿಸುತ್ತಿರುವ ಕಾಯ್ದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ವಾಗ್ದಾಳಿ ನಡೆಸಿದರು.

ABOUT THE AUTHOR

...view details