ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರ: ಕಾಂಜುರ್ಮಾರ್ಗ್ ಮೆಟ್ರೋ ಕಾರ್ ಶೆಡ್ ಕೆಲಸ ನಿಲ್ಲಿಸುವಂತೆ ತಿಳಿಸಿದ ಕೇಂದ್ರ ಸರ್ಕಾರ - ಮಹಾರಾಷ್ಟ್ರ ಸರ್ಕಾರ

ಕಂಜುರ್ಮಾರ್ಗ್ ಪ್ರದೇಶದಲ್ಲಿ ಉದ್ದೇಶಿತ ಮೆಟ್ರೋ ಕಾರ್ ಶೆಡ್ ನಿರ್ಮಾಣವನ್ನು ನಿಲ್ಲಿಸುವಂತೆ ಹೇಳಿ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

uddhav
uddhav

By

Published : Nov 3, 2020, 6:44 PM IST

ಮುಂಬೈ (ಮಹಾರಾಷ್ಟ್ರ):ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಾಂಜುರ್ಮಾರ್ಗ್‌ನಲ್ಲಿ ಮೆಟ್ರೋ ಕಾರ್ ಶೆಡ್ ಅಭಿವೃದ್ಧಿಪಡಿಸುವುದನ್ನು ತಡೆಯುವಂತೆ ಕೇಂದ್ರ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಹೇಳಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಕಂಜುರ್ಮಾರ್ಗ್ ಪ್ರದೇಶದಲ್ಲಿ ಉದ್ದೇಶಿತ ಮೆಟ್ರೋ ಕಾರ್ ಶೆಡ್ ನಿರ್ಮಾಣವನ್ನು ನಿಲ್ಲಿಸುವಂತೆ ಹೇಳಿ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದರ ಪರಿಣಾಮವಾಗಿ ಮಹಾರಾಷ್ಟ್ರ ಸರ್ಕಾರವು ಈ ಹಿಂದೆ ಆರೆ ಮೆಟ್ರೋ ಕಾರ್ ಶೆಡ್ ಕೆಲಸವನ್ನು ಸ್ಥಗಿತಗೊಳಿಸಿತ್ತು. ಬಳಿಕ ಯೋಜನೆಯನ್ನು ಕಾಂಜುರ್ಮಾರ್ಗ್‌ಗೆ ಸ್ಥಳಾಂತರಿಸುವುದಾಗಿ ಘೋಷಿಸಿತ್ತು.

ಕಾಂಜುರ್ಮಾರ್ಗ್‌ನಲ್ಲಿರುವ 102 ಎಕರೆ ಜಮೀನು ಭಾರತ ಸರ್ಕಾರದ ಉಪ್ಪು ಆಯುಕ್ತರ ಅಡಿಯಲ್ಲಿ ಬರುತ್ತದೆ. ಹೀಗಾಗಿ ಕಾಮಾಗಾರಿ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ ಎಂದು ಮೂಲಗಳು ವರದಿ ಮಾಡಿವೆ.

ABOUT THE AUTHOR

...view details