ಕರ್ನಾಟಕ

karnataka

ETV Bharat / bharat

ಕಾಶ್ಮೀರದ ವಿಚಾರದಲ್ಲಿ ಚೀನಾ ಮೂಗು ತೂರಿಸಬಾರದು: ರವೀಶ್​ ಕುಮಾರ್​​ ಎಚ್ಚರಿಕೆ - ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್​ ಕುಮಾರ್ ಸುದ್ದಿಗೋಷ್ಟಿ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ದುರುಪಯೋಗ ಪಡಿಸಿಕೊಳ್ಳಲು ಪಾಕಿಸ್ತಾನ ಪ್ರಯತ್ನಿಸುತ್ತಿದ್ದು, ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿರುವ ಚೀನಾಗೆ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್​ ಕುಮಾರ್ ತಿರುಗೇಟು ನೀಡಿದ್ದಾರೆ.

MEA Ravish Kumar briefing on UNSC move
ರವೀಶ್​ ಕುಮಾರ್

By

Published : Jan 16, 2020, 6:14 PM IST

ನವದೆಹಲಿ:ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದವನ್ನು ಎತ್ತಿಹಿಡಿಯಲು ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿರುವ ಚೀನಾಗೆ ತಿರುಗೇಟು ನೀಡಿದ್ದು, ಜಾಗತಿಕ ಒಮ್ಮತಕ್ಕೆ ಬೀಜಿಂಗ್​ ತಲೆದೂಗಬೇಕು, ಭವಿಷ್ಯದಲ್ಲಿ ಇಂತಹ ನಡೆಗಳಿಂದ ದೂರ ಇರಬೇಕು ಎಂದು ಎಚ್ಚರಿಕೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್​ ಕುಮಾರ್ ಸುದ್ದಿಗೋಷ್ಠಿ

ಚೀನಾದ ಸಹಾಯದೊಂದಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನವು ಪದೇ ಪದೆ ಕಾಶ್ಮೀರ ವಿವಾದವನ್ನು ಎತ್ತಿಹಿಡಿಯುತ್ತಿದೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಇತರ ರಾಷ್ಟ್ರಗಳ 15 ಸದಸ್ಯರನ್ನೊಳಗೊಂಡ ಮಂಡಳಿಯು ಕಾಶ್ಮೀರ ವಿವಾದವು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯವೆಂದು ಅಭಿಪ್ರಾಯಪಟ್ಟಿದ್ದು, ಇತರ ದೇಶಗಳ ಸಹಾಯ ಪಡೆಯುವಲ್ಲಿ ಪಾಕಿಸ್ತಾನ ಮತ್ತೆ ವಿಫಲವಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್​ ಕುಮಾರ್, ​​ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ದುರುಪಯೋಗ ಪಡಿಸಿಕೊಳ್ಳಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಬಹು ರಾಷ್ಟ್ರಗಳ ಅಭಿಪ್ರಾಯಕ್ಕೆ ಚೀನಾ ತಲೆದೂಗಬೇಕು ಹಾಗೂ ಕಾಶ್ಮೀರದ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಭಾರತದಲ್ಲಿ ಈ ಬಾರಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್​ಸಿಒ)ಶೃಂಗಸಭೆಗೆ ಶಾಂಘೈ ಕೂಟದ ಎಲ್ಲಾ ಎಂಟು ರಾಷ್ಟ್ರಗಳಿಗೂ ಆಹ್ವಾನ ನೀಡಲಾಗಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ರವೀಶ್​ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details